<p><strong>ಬೆಂಗಳೂರು: </strong>ಎತ್ತಿನ ಹೊಳೆ ಯೋಜನೆ ಕಾಮಗಾರಿ ಮೊತ್ತವನ್ನು ₹12,000 ಕೋಟಿಯಿಂದ ₹25,000 ಕೋಟಿಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ವಿನಯ್ ಆರ್.ವಿ ಎಂಬುವವರು ದೂರು ನೀಡಿದ್ದಾರೆ.</p>.<p>2018–19 ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಜಲಸಂಪನ್ಮೂಲ ಮಂಡಳಿ ಸಭೆಯಲ್ಲಿ ಕಾಮಗಾರಿ ಮೊತ್ತ ಏರಿಕೆಗೆ ಅನುಮತಿ ನೀಡಲಾಗಿದ್ದು, ಅರಸೀಕೆರೆ, ತುಮಕೂರು ಮತ್ತು ಇತರ ಕಡೆಗಳಲ್ಲಿ ನಡೆದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ತಿಳಿಸಿದ್ದಾರೆ.</p>.<p>ಆಗ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ.ಜೈ.ಪ್ರಕಾಶ್ ಅವರು ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಹುದ್ದೆಯ ಪ್ರಭಾರದಲ್ಲಿದ್ದರು. ಕಾಮಗಾರಿ ಹಂಚಿಕೆಯಲ್ಲಿ ಅನುಭವವಿಲ್ಲದ ಗುತ್ತಿಗೆದಾರರಿಗೆ ಹಂಚಿಕೆ ಮಾಡಲಾಗಿದೆ. ವಿವೇಚನೆ ಇಲ್ಲದೆ, ಕಾಮಗಾರಿ ಮೊತ್ತವನ್ನು ಏರಿಕೆ ಮಾಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದಿದ್ದಾರೆ.</p>.<p>2018 ರ ಜೂನ್ನಿಂದ 2019 ರ ಜುಲೈವರೆಗೆ ಜಲಸಂಪನ್ಮೂಲ ಇಲಾಖೆಗೆ ಸೇರಿದ ಕೆಬಿಜೆಎನ್ಎಲ್, ಕೆಎನ್ಎನ್ಎಲ್, ವಿಜೆಎನ್ಎಲ್ ಇತ್ಯಾದಿ ನಿಗಮಗಳ ಇಎಫ್ಐಗಳನ್ನು ಕನಿಷ್ಠ ₹3,000 ಕೋಟಿಯಿಂದ ₹4,000 ಕೋಟಿಗಳಿಗೆ ಅನುಮೋದಿಸಿ ಹಿಂದಿನ ಸರ್ಕಾರದ ಸಚಿವರೊಬ್ಬರಿಗೆ ಲೋಕಸಭಾ ಚುನಾವಣೆಗಾಗಿ ₹1,000 ದಿಂದ ₹1,500 ಕೋಟಿ ಚುನಾವಣೆ ನಿಧಿಯನ್ನು ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಂದ ಸಂಗ್ರಹಣೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.</p>.<p>ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಜೈ.ಪ್ರಕಾಶ್ 2018 ರ ಜೂನ್ನಿಂದ 2019 ರ ಜುಲೈವರೆಗಿನ ಅವಧಿಯಲ್ಲಿ ಕೆಬಿಜೆಎನ್ಎಲ್, ಕೆಎನ್ಎನ್ಎಲ್, ವಿಜೆಎನ್ಎಲ್ ಮತ್ತು ಸಿಎನ್ಎನ್ಎಲ್ ತಾಂತ್ರಿಕ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಸಮಯದಲ್ಲಿ ನಾಲ್ಕೂ ನಿಗಮಗಳ ಕಾಮಗಾರಿಗಳ ಮೂಲ ಅಂದಾಜಿಗೆ ₹5,000 ಕೋಟಿಗಳ ಹೆಚ್ಚುವರಿ ಇಎಫ್ಐ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎತ್ತಿನ ಹೊಳೆ ಯೋಜನೆ ಕಾಮಗಾರಿ ಮೊತ್ತವನ್ನು ₹12,000 ಕೋಟಿಯಿಂದ ₹25,000 ಕೋಟಿಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ವಿನಯ್ ಆರ್.ವಿ ಎಂಬುವವರು ದೂರು ನೀಡಿದ್ದಾರೆ.</p>.<p>2018–19 ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಜಲಸಂಪನ್ಮೂಲ ಮಂಡಳಿ ಸಭೆಯಲ್ಲಿ ಕಾಮಗಾರಿ ಮೊತ್ತ ಏರಿಕೆಗೆ ಅನುಮತಿ ನೀಡಲಾಗಿದ್ದು, ಅರಸೀಕೆರೆ, ತುಮಕೂರು ಮತ್ತು ಇತರ ಕಡೆಗಳಲ್ಲಿ ನಡೆದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ತಿಳಿಸಿದ್ದಾರೆ.</p>.<p>ಆಗ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ.ಜೈ.ಪ್ರಕಾಶ್ ಅವರು ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಹುದ್ದೆಯ ಪ್ರಭಾರದಲ್ಲಿದ್ದರು. ಕಾಮಗಾರಿ ಹಂಚಿಕೆಯಲ್ಲಿ ಅನುಭವವಿಲ್ಲದ ಗುತ್ತಿಗೆದಾರರಿಗೆ ಹಂಚಿಕೆ ಮಾಡಲಾಗಿದೆ. ವಿವೇಚನೆ ಇಲ್ಲದೆ, ಕಾಮಗಾರಿ ಮೊತ್ತವನ್ನು ಏರಿಕೆ ಮಾಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದಿದ್ದಾರೆ.</p>.<p>2018 ರ ಜೂನ್ನಿಂದ 2019 ರ ಜುಲೈವರೆಗೆ ಜಲಸಂಪನ್ಮೂಲ ಇಲಾಖೆಗೆ ಸೇರಿದ ಕೆಬಿಜೆಎನ್ಎಲ್, ಕೆಎನ್ಎನ್ಎಲ್, ವಿಜೆಎನ್ಎಲ್ ಇತ್ಯಾದಿ ನಿಗಮಗಳ ಇಎಫ್ಐಗಳನ್ನು ಕನಿಷ್ಠ ₹3,000 ಕೋಟಿಯಿಂದ ₹4,000 ಕೋಟಿಗಳಿಗೆ ಅನುಮೋದಿಸಿ ಹಿಂದಿನ ಸರ್ಕಾರದ ಸಚಿವರೊಬ್ಬರಿಗೆ ಲೋಕಸಭಾ ಚುನಾವಣೆಗಾಗಿ ₹1,000 ದಿಂದ ₹1,500 ಕೋಟಿ ಚುನಾವಣೆ ನಿಧಿಯನ್ನು ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಂದ ಸಂಗ್ರಹಣೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.</p>.<p>ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಜೈ.ಪ್ರಕಾಶ್ 2018 ರ ಜೂನ್ನಿಂದ 2019 ರ ಜುಲೈವರೆಗಿನ ಅವಧಿಯಲ್ಲಿ ಕೆಬಿಜೆಎನ್ಎಲ್, ಕೆಎನ್ಎನ್ಎಲ್, ವಿಜೆಎನ್ಎಲ್ ಮತ್ತು ಸಿಎನ್ಎನ್ಎಲ್ ತಾಂತ್ರಿಕ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಸಮಯದಲ್ಲಿ ನಾಲ್ಕೂ ನಿಗಮಗಳ ಕಾಮಗಾರಿಗಳ ಮೂಲ ಅಂದಾಜಿಗೆ ₹5,000 ಕೋಟಿಗಳ ಹೆಚ್ಚುವರಿ ಇಎಫ್ಐ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>