<p><strong>ಬೆಂಗಳೂರು:</strong> ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ತಲಾ ಒಂದು ಉಪ ನೋಂದಣಿ ಕಚೇರಿ ಭಾನುವಾರವೂ ತೆರೆದಿರಲಿದೆ. ರಜಾ ದಿನಗಳಲ್ಲೂ ನೋಂದಣಿಗೆ ಅವಕಾಶ ಕಲ್ಪಿಸುವ ಈ ವ್ಯವಸ್ಥೆಯನ್ನು ರಾಜ್ಯದಾದ್ಯಂತ ವಿಸ್ತರಿಸಿ ಕಂದಾಯ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.</p>.<p>ಬೆಂಗಳೂರು ನಗರದಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಈಗ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಭಾನುವಾರದಂದು ತೆರೆದಿರಲಿರುವ ಉಪ ನೋಂದಣಿ ಕಚೇರಿಗಳನ್ನು ಸರದಿಯ ಆಧಾರದಲ್ಲಿ ಗುರುತಿಸಿ, ಮಾಹಿತಿಯನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಭಾನುವಾರ ತೆರಿದಿರುವ ಉಪ ನೋಂದಣಿ ಕಚೇರಿಗೆ ಮಂಗಳವಾರದಂದು ರಜೆ ನೀಡಲಾಗುತ್ತದೆ.</p>.<p>‘ಎನಿವೇರ್ ನೋಂದಣಿಯೂ ವಿಸ್ತರಣೆ’: ಸ್ತಿರಾಸ್ತಿ ನೋಂದಣಿಯೂ ಸೇರಿದಂತೆ ಯಾವುದೇ ದಾಖಲೆಗಳನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸುವ ‘ಎನಿವೇರ್ ನೋಂದಣಿ’ ವ್ಯವಸ್ಥೆಯನ್ನು ರಾಜ್ಯದಾದ್ಯಂತ ವಿಸ್ತರಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆಯನ್ನು ಆರಂಭದಲ್ಲಿ ಜಾರಿಗೊಳಿಸಲಾಗಿತ್ತು. ನಂತರ ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಎಲ್ಲ ಕಡೆಗಳಲ್ಲಿ ಉತ್ತಮ ಸ್ಪಂದನೆ ದೊರಕಿದೆ. ಆದ್ದರಿಂದ ಈ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ತಲಾ ಒಂದು ಉಪ ನೋಂದಣಿ ಕಚೇರಿ ಭಾನುವಾರವೂ ತೆರೆದಿರಲಿದೆ. ರಜಾ ದಿನಗಳಲ್ಲೂ ನೋಂದಣಿಗೆ ಅವಕಾಶ ಕಲ್ಪಿಸುವ ಈ ವ್ಯವಸ್ಥೆಯನ್ನು ರಾಜ್ಯದಾದ್ಯಂತ ವಿಸ್ತರಿಸಿ ಕಂದಾಯ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.</p>.<p>ಬೆಂಗಳೂರು ನಗರದಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಈಗ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಭಾನುವಾರದಂದು ತೆರೆದಿರಲಿರುವ ಉಪ ನೋಂದಣಿ ಕಚೇರಿಗಳನ್ನು ಸರದಿಯ ಆಧಾರದಲ್ಲಿ ಗುರುತಿಸಿ, ಮಾಹಿತಿಯನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಭಾನುವಾರ ತೆರಿದಿರುವ ಉಪ ನೋಂದಣಿ ಕಚೇರಿಗೆ ಮಂಗಳವಾರದಂದು ರಜೆ ನೀಡಲಾಗುತ್ತದೆ.</p>.<p>‘ಎನಿವೇರ್ ನೋಂದಣಿಯೂ ವಿಸ್ತರಣೆ’: ಸ್ತಿರಾಸ್ತಿ ನೋಂದಣಿಯೂ ಸೇರಿದಂತೆ ಯಾವುದೇ ದಾಖಲೆಗಳನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸುವ ‘ಎನಿವೇರ್ ನೋಂದಣಿ’ ವ್ಯವಸ್ಥೆಯನ್ನು ರಾಜ್ಯದಾದ್ಯಂತ ವಿಸ್ತರಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆಯನ್ನು ಆರಂಭದಲ್ಲಿ ಜಾರಿಗೊಳಿಸಲಾಗಿತ್ತು. ನಂತರ ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಎಲ್ಲ ಕಡೆಗಳಲ್ಲಿ ಉತ್ತಮ ಸ್ಪಂದನೆ ದೊರಕಿದೆ. ಆದ್ದರಿಂದ ಈ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>