<p><strong>ಪೀಣ್ಯ ದಾಸರಹಳ್ಳಿ:</strong> 'ಬೆಂಗಳೂರು ಕಾಂಕ್ರಿಟ್ ನಗರವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಎಚ್ಚರವಹಿಸದಿದ್ದರೆ, ಬೆನ್ನಿಗೆ ಆಕ್ಸಿಜನ್ ಕಿಟ್ ಕಟ್ಟಿಕೊಂಡು ಓಡಾಡುವ ಸ್ಥಿತಿ ಬರಲಿದೆ’ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್ ಎಚ್ಚರಿಸಿದರು.</p>.<p>ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಎಂ.ಎಸ್. ಕಾಲೇಜು, ಜಯ ಕರ್ನಾಟಕ ರಾಜ್ಯ ಸಂಘಟನೆ, ಲೈನ್ಸ್ ಕ್ಲಬ್ ವೀರ ಹೊಯ್ಸಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ನಗರದ ಪ್ರತಿಯೊಬ್ಬ ನಾಗರಿಕ ಮನೆ ಬಳಿ ಒಂದು ಗಿಡವನ್ನಾದರೂ ನೆಟ್ಟಿ ಬೆಳೆಸಲು ಯತ್ನಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಕಾಲೇಜಿನ ಚೇರ್ಮನ್ ವಾಲ್ಟರ್ ಜೈ ಸಿಂಗ್ ಮಾತನಾಡಿ, 'ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ವಾಯುಮಾಲಿನ್ಯವೂ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಹೆಚ್ಚು ಹೆಚ್ಚು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಿ' ಎಂದು ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಮಧುಸೂದನ್, ಎನ್.ಜಿ.ಗುರುಪ್ರಸಾದ್, ಕಾಲೇಜಿನ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು</p>.<p>ಕಾರ್ಯಕ್ರಮಕ್ಕೂ ಮುನ್ನ ದಾಸರಹಳ್ಳಿಯ ಎಂಟನೇ ಮೈಲಿ ವೃತ್ತದಿಂದ ಸಪ್ತಗಿರಿ ಕಾಲೇಜ್ ಹಿಂಭಾಗದಲ್ಲಿರುವ ಎಜಿಬಿ ಬಡಾವಣೆವರೆಗೂ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಸರದ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಭಿತ್ತಿಪತ್ರ ಹಿಡಿದು ಜಾಥಾ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> 'ಬೆಂಗಳೂರು ಕಾಂಕ್ರಿಟ್ ನಗರವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಎಚ್ಚರವಹಿಸದಿದ್ದರೆ, ಬೆನ್ನಿಗೆ ಆಕ್ಸಿಜನ್ ಕಿಟ್ ಕಟ್ಟಿಕೊಂಡು ಓಡಾಡುವ ಸ್ಥಿತಿ ಬರಲಿದೆ’ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್ ಎಚ್ಚರಿಸಿದರು.</p>.<p>ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಎಂ.ಎಸ್. ಕಾಲೇಜು, ಜಯ ಕರ್ನಾಟಕ ರಾಜ್ಯ ಸಂಘಟನೆ, ಲೈನ್ಸ್ ಕ್ಲಬ್ ವೀರ ಹೊಯ್ಸಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ನಗರದ ಪ್ರತಿಯೊಬ್ಬ ನಾಗರಿಕ ಮನೆ ಬಳಿ ಒಂದು ಗಿಡವನ್ನಾದರೂ ನೆಟ್ಟಿ ಬೆಳೆಸಲು ಯತ್ನಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಕಾಲೇಜಿನ ಚೇರ್ಮನ್ ವಾಲ್ಟರ್ ಜೈ ಸಿಂಗ್ ಮಾತನಾಡಿ, 'ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ವಾಯುಮಾಲಿನ್ಯವೂ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಹೆಚ್ಚು ಹೆಚ್ಚು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಿ' ಎಂದು ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಮಧುಸೂದನ್, ಎನ್.ಜಿ.ಗುರುಪ್ರಸಾದ್, ಕಾಲೇಜಿನ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು</p>.<p>ಕಾರ್ಯಕ್ರಮಕ್ಕೂ ಮುನ್ನ ದಾಸರಹಳ್ಳಿಯ ಎಂಟನೇ ಮೈಲಿ ವೃತ್ತದಿಂದ ಸಪ್ತಗಿರಿ ಕಾಲೇಜ್ ಹಿಂಭಾಗದಲ್ಲಿರುವ ಎಜಿಬಿ ಬಡಾವಣೆವರೆಗೂ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಸರದ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಭಿತ್ತಿಪತ್ರ ಹಿಡಿದು ಜಾಥಾ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>