ರೋಟರಿ ಕ್ಲಬ್ನ ರಮೇಶ್ ಶಿವಣ್ಣ, ’ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ ಎಂಬುದು ಈ ಬಾರಿಯ ಪರಿಸರದ ದಿನದ ಘೋಷವಾಕ್ಯ. ನಾವು ಕೂಡ ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಅಭಿವೃದ್ಧಿ ಹೆಸರಿನಲ್ಲಿ ಪರಿಸರದ ಮೇಲಾಗುತ್ತಿರುವ ಹಾನಿಯನ್ನು ಆದಷ್ಟು ತಪ್ಪಿಸಬೇಕು. ಆರ್ಥಿಕ ಚಟುವಟಿಕೆಯೂ ಪರಿಸರ ಸಂರಕ್ಷಣೆಗೆ ಪೂರಕವಾಗಿರಬೇಕು’ ಎಂದರು.