ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇವಿಎಂನಿಂದ ಸೋಲು - ಕೆ.ಬಿ.ಕೋಳಿವಾಡ ಆರೋಪ

Last Updated 17 ಡಿಸೆಂಬರ್ 2019, 19:36 IST
ಅಕ್ಷರ ಗಾತ್ರ

ಬೆಂಗಳೂರು: ‘ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ’ ಎಂದು ರಾಣೇಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ಕೆ.ಬಿ.ಕೋಳಿವಾಡ ಆರೋಪಿಸಿದ್ದಾರೆ.

‘ಇವಿಎಂ ಹ್ಯಾಕ್ ಮಾಡಿದ್ದರಿಂದ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ ಎಂಬ ವಿಚಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ನನಗೆ ತಿಳಿಸಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಈ ವಿಚಾರಸ್ಪಷ್ಟಪಡಿಸಿದರು’ ಎಂದು ಹೇಳಿದ್ದಾರೆ.

‘ಎಂಜಿನಿಯರೊಬ್ಬರು ಇವಿಎಂ ಸಮೇತ ಸಿದ್ದರಾಮಯ್ಯ ಮನೆಗೆ ಬಂದಿದ್ದರಂತೆ. ಹ್ಯಾಕ್ ಹೇಗೆ ಮಾಡುತ್ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮತದಾನಕ್ಕೆ ಇವಿಎಂ ಬಳಸುವವರೆಗೂ ಬಿಜೆಪಿ ಗೆಲ್ಲುತ್ತಲೇ ಇರುತ್ತದೆ. ಈ ಬಗ್ಗೆ ರಾಷ್ಟ್ರವ್ಯಾಪಿ ಹೋರಾಟ ಮಾಡಬೇಕಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT