ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಾಜಿ ಸೈನಿಕನ ಹತ್ಯೆ

ಖಾರದ ಪುಡಿ ಎರಚಿ ಪರಾರಿ
Last Updated 14 ಏಪ್ರಿಲ್ 2022, 19:16 IST
ಅಕ್ಷರ ಗಾತ್ರ

ಬೆಂಗಳೂರು: ದೊಮ್ಮಲೂರು ಬಳಿಯ ಗೌತಮ್‌ ನಗರದಲ್ಲಿ ಮಾಜಿ ಸೈನಿಕ ಸುರೇಶ್ ಉರ್ಪ್ ಜುಡೆ (56) ಎಂಬುವರನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಲಾಗಿದ್ದು, ಸಂಬಂಧಿಕರೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

‘ಸೇನೆಯಿಂದ ನಿವೃತ್ತರಾದ ಬಳಿಕ ಸುರೇಶ್ ಅವರು ಒಂಟಿಯಾಗಿ ನೆಲೆಸಿದ್ದರು. ಬುಧವಾರ ಅವರ ಮನೆಗೆ ಬಂದಿದ್ದ ಆರೋಪಿಗಳು, ಹತ್ಯೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸುರೇಶ್ ಹಾಗೂ ಸಂಬಂಧಿಕರ ನಡುವೆ ಆಸ್ತಿ ವಿಚಾರವಾಗಿ ಆಗಾಗ ಗಲಾಟೆ ಆಗುತ್ತಿತ್ತು. ಈ ಬಗ್ಗೆ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಆಸ್ತಿ ಕಾರಣಕ್ಕಾಗಿಯೇ ಸುರೇಶ್ ಅವರನ್ನು ಕೊಲೆ ಮಾಡಿರುವ ಅನುಮಾನವಿದೆ. ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

‘ಪರಾರಿಯಾಗುವ ವೇಳೆಯಲ್ಲಿ ಆರೋಪಿಗಳು, ಮೃತದೇಹದ ಮೇಲೆ ಹಾಗೂ ಸುತ್ತಮುತ್ತ ಖಾರದ ಪುಡಿ ಎರಚಿ ಹೋಗಿದ್ದಾರೆ.’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT