ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮೇಯರ್ ಎಂ.ಗೌತಮ್ ಕುಮಾರ್, ‘ಗಂಗಾಂಬಿಕೆ ಅವರು ಮೇಯರ್ ಆಗಿದ್ದ ಅವಧಿಯಲ್ಲಿ ಈ ಕಾಮಗಾರಿಗೆ ಅನುದಾನ ನೀಡಿರುವುದು ನಿಜ. ಆದರೆ, ನಮ್ಮ ಅವಧಿಯಲ್ಲೂ ಇದಕ್ಕೆ ಮತ್ತಷ್ಟು ಅನುದಾನ ಒದಗಿಸಿದ್ದೇವೆ. ಅಶ್ವಾರೂಢ ಬಸವೇಶ್ವರ ಪ್ರತಿಮೆಯ ವಿನ್ಯಾಸ ರೂಪಿಸಿ ಅದನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಿದ್ದೇವೆ. ಶಿಲಾಫಲಕದಲ್ಲಿ ಯಾರ ಹೆಸರು ಹಾಕಬೇಕು ಎಂಬುದನ್ನು ಅಧಿಕಾರಿಗಳು ನಿರ್ಣಯಿಸುತ್ತಾರೆ. ಅವರು ಶಿಷ್ಟಾಚಾರ ಪ್ರಕಾರ ಕ್ರಮಕೈಗೊಂಡಿರುತ್ತಾರೆ. ಈ ವಿಚಾರದಲ್ಲಿ ನನ್ನ ಪಾತ್ರ ಏನೂ ಇಲ್ಲ’ ಎಂದು ಸ್ಪಷ್ಟಪಡಿಸಿದರು.