<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಬೆಂಗಳೂರಿನಲ್ಲಿರುವ ಘನತ್ಯಾಜ್ಯ ಮಾಫಿಯಗೆ ಮಟ್ಟ ಹಾಕಲಾಗುವುದು’ ಎಂದರು.</p>.<p>ಬೆಂಗಳೂರು ಶಾಸಕರು ಈ ವಿಚಾರವಾಗಿ ಒತ್ತಡ ಹಾಕುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಹೊರ ವಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಘನತ್ಯಾಜ್ಯ ವಿಲೇವಾರಿ ಕೇಂದ್ರ ಸ್ಥಾಪಿಸಲು ಮುಂದಾಗಿದ್ದೇವೆ.‘ ಎಂದರು.</p>.<p>ಇದಕ್ಕಾಗಿ ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಲ್ಲಿ ಅಳವಡಿಸಿಕೊಂಡಿರುವ ಮಾದರಿಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು ಎಂದರು.</p>.<p>‘ಬೆಂಗಳೂರಿನಿಂದ 15 ಕಿ.ಮೀ ದೂರದಲ್ಲಿ ಹೊರವಲಯದಲ್ಲಿ ನಾಲ್ಕು ಕಡೆ 100 ಎಕರೆ ಜಮೀನು ಗುರುತಿಸಲಾಗಿದೆ. ಶೀಘ್ರವೇ ಟೆಂಡರ್ ಕರೆದು ಶಾಶ್ವತ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.</p>.<p>‘ಇತ್ತೀಚೆಗೆ ಕಸದ ಟೆಂಡರ್ ವಿಚಾರದಲ್ಲಿ ಪಕ್ಷದ ಅಧ್ಯಕ್ಷರೊಬ್ಬರು ನಾನು ₹ 15 ಸಾವಿರ ಕೋಟಿ ಲೂಟಿ ಮಾಡಿದ್ದಾಗಿ ಹೇಳಿಕೆ ನೀಡಿ ಬ್ಲ್ಯಾಕ್ಮೇಲ್ ಮಾಡುವ ಪ್ರಯತ್ನ ಮಾಡಿದ್ದರು. ಈ ಬೆದರಿಕೆಗೆ ಹೆದರಲ್ಲ. ನಮ್ಮ ಸರ್ಕಾರ ಕೂಡಾ ಜಗ್ಗುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಬೆಂಗಳೂರಿನಲ್ಲಿರುವ ಘನತ್ಯಾಜ್ಯ ಮಾಫಿಯಗೆ ಮಟ್ಟ ಹಾಕಲಾಗುವುದು’ ಎಂದರು.</p>.<p>ಬೆಂಗಳೂರು ಶಾಸಕರು ಈ ವಿಚಾರವಾಗಿ ಒತ್ತಡ ಹಾಕುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಹೊರ ವಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಘನತ್ಯಾಜ್ಯ ವಿಲೇವಾರಿ ಕೇಂದ್ರ ಸ್ಥಾಪಿಸಲು ಮುಂದಾಗಿದ್ದೇವೆ.‘ ಎಂದರು.</p>.<p>ಇದಕ್ಕಾಗಿ ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಲ್ಲಿ ಅಳವಡಿಸಿಕೊಂಡಿರುವ ಮಾದರಿಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು ಎಂದರು.</p>.<p>‘ಬೆಂಗಳೂರಿನಿಂದ 15 ಕಿ.ಮೀ ದೂರದಲ್ಲಿ ಹೊರವಲಯದಲ್ಲಿ ನಾಲ್ಕು ಕಡೆ 100 ಎಕರೆ ಜಮೀನು ಗುರುತಿಸಲಾಗಿದೆ. ಶೀಘ್ರವೇ ಟೆಂಡರ್ ಕರೆದು ಶಾಶ್ವತ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.</p>.<p>‘ಇತ್ತೀಚೆಗೆ ಕಸದ ಟೆಂಡರ್ ವಿಚಾರದಲ್ಲಿ ಪಕ್ಷದ ಅಧ್ಯಕ್ಷರೊಬ್ಬರು ನಾನು ₹ 15 ಸಾವಿರ ಕೋಟಿ ಲೂಟಿ ಮಾಡಿದ್ದಾಗಿ ಹೇಳಿಕೆ ನೀಡಿ ಬ್ಲ್ಯಾಕ್ಮೇಲ್ ಮಾಡುವ ಪ್ರಯತ್ನ ಮಾಡಿದ್ದರು. ಈ ಬೆದರಿಕೆಗೆ ಹೆದರಲ್ಲ. ನಮ್ಮ ಸರ್ಕಾರ ಕೂಡಾ ಜಗ್ಗುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>