‘ಅಡುಗೆ ಕೋಣೆಯಲ್ಲಿ ಬೆಳಿಗ್ಗೆಯಿಂದಲೇ ನಿಧಾನವಾಗಿ ಅನಿಲ ಸೋರಿಕೆಯಾಗುತ್ತಿತ್ತು ಎಂಬುದು ಗೊತ್ತಾಗಿದೆ. ಇದು ವಿನೋದ್ ಗಮನಕ್ಕೆ ಬಂದಿರಲಿಲ್ಲ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಏಕಾಏಕಿ ಸ್ಫೋಟ ಸಂಭವಿಸಿ, ಬೆಂಕಿ ಹೊತ್ತಿಕೊಂಡಿತ್ತು. ವಿನೋದ್ ಅವರಿಗೆ ಬೆಂಕಿ ತಾಗಿತ್ತು. ಅವರ ಕೂಗಾಟ ಕೇಳಿ ಮನೆಯೊಳಗೆ ಹೋಗಿದ್ದ ಸ್ಥಳೀಯರು, ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.’