ಬೆಂಗಳೂರು: ಅಡುಗೆ ಮಾಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ ಸ್ಪೋಟದಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಹಾರದ ಅಂಕಿತ್ರಾಜ್ (25) ಗಾಯಗೊಂಡವರು.
ವಾರದ ಹಿಂದಷ್ಟೇ ಲಕ್ಷ್ಮಿಲೇಔಟ್ಗೆ ಬಂದಿದ್ದ ಅಂಕಿತ್ ಮೂರನೇ ಮಹಡಿಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಬುಧವಾರ ಬೆಳಿಗ್ಗೆ 8 ಗಂಟೆ ಸಂದರ್ಭದಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ಧಾರೆ ಎಂದು ಮೂಲಗಳು ಹೇಳಿವೆ.