ಸಮುದಾಯದ ಮುಖಂಡ ಎಂ.ರಾಜು, ‘ಕುಂಬಾರ ಸಮುದಾಯದ ಅಭಿವೃದ್ಧಿ ನಿಗಮ 2023ರ ಮಾರ್ಚ್ನಲ್ಲಿ ಸ್ಥಾಪನೆಯಾಗಿದ್ದರೂ ಅಧ್ಯಕ್ಷರ ನೇಮಕಾತಿ ನಡೆಯಲಿಲ್ಲ. ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಅರ್ಹ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ನಿಗಮಕ್ಕೆ ₹ 100 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಇದರಿಂದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ ಸಾಧ್ಯವಾಗುತ್ತದೆ’ ಎಂದು ಹೇಳಿದರು.