<p><strong>ಬೆಂಗಳೂರು: </strong>ಕ್ರೈಂ ಪೊಲೀಸರ ಸೋಗಿನಲ್ಲಿ ದುಷ್ಕರ್ಮಿಗಳಿಬ್ಬರು ಅಂಬರೀಷ್ ಅಡಿಗ ಎಂಬುವರನ್ನು ಸುಲಿಗೆ ಮಾಡಿದ್ದು, ಈ ಸಂಬಂದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕಬ್ಬನ್ ಉದ್ಯಾನದಲ್ಲಿ ಇದೇ 10ರಂದು ನಡೆದಿರುವ ಘಟನೆ ಸಂಬಂಧ ಅಂಬರೀಷ್ ಅವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಖಾಸಗಿ ಕಂಪನಿ ಉದ್ಯೋಗಿ ಆಗಿರುವ ದೂರುದಾರ ಅಂಬರೀಷ್ ಸಂಜೆ ಉದ್ಯಾನದಲ್ಲಿ ಕುಳಿತಿದ್ದರು. ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ತಾವು ಕ್ರೈಂ ಪೊಲೀಸರೆಂದು ಹೇಳಿಕೊಂಡಿದ್ದರು. ‘ನೀನು ದರೋಡೆ ಗ್ಯಾಂಗ್ ಸದಸ್ಯನಂತೆ ಕಾಣುತ್ತಿದ್ದಿಯಾ. ನಮಗೆ ₹ 30,000 ಕೊಡು. ಇಲ್ಲದಿದ್ದರೆ, ನಿನ್ನ ವಿರುದ್ಧ ಪ್ರಕರಣ ದಾಖಲಿಸುತ್ತೇವೆ’ ಎಂಬುದಾಗಿ ಆರೋಪಿಗಳು ಬೆದರಿಸಿದ್ದರು’ ಎಂದು ತಿಳಿಸಿದರು.</p>.<p>‘ತಮ್ಮ ಬಳಿ ಹಣವಿಲ್ಲ, ಎಟಿಎಂ ಕಾರ್ಡ್ ಮಾತ್ರ ಇರುವುದಾಗಿ ದೂರುದಾರ ಹೇಳಿದ್ದರು. ಪುನಃ ಬೆದರಿಕೆಯೊಡ್ಡಿದ್ದ ಆರೋಪಿಗಳು ದೂರುದಾರರನ್ನು ಕಸ್ತೂರ್ ಬಾ ರಸ್ತೆಯ ಎಚ್ಡಿಎಫ್ಸಿ ಬ್ಯಾಂಕ್ ಎಟಿಎಂ ಘಟಕಕ್ಕೆ ಕರೆದೊಯ್ದಿದ್ದರು. ಅಲ್ಲಿಯೇ ₹ 30,000 ಡ್ರಾ ಮಾಡಿಸಿ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಅಂಬರೀಷ್ ಅವರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕ್ರೈಂ ಪೊಲೀಸರ ಸೋಗಿನಲ್ಲಿ ದುಷ್ಕರ್ಮಿಗಳಿಬ್ಬರು ಅಂಬರೀಷ್ ಅಡಿಗ ಎಂಬುವರನ್ನು ಸುಲಿಗೆ ಮಾಡಿದ್ದು, ಈ ಸಂಬಂದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕಬ್ಬನ್ ಉದ್ಯಾನದಲ್ಲಿ ಇದೇ 10ರಂದು ನಡೆದಿರುವ ಘಟನೆ ಸಂಬಂಧ ಅಂಬರೀಷ್ ಅವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಖಾಸಗಿ ಕಂಪನಿ ಉದ್ಯೋಗಿ ಆಗಿರುವ ದೂರುದಾರ ಅಂಬರೀಷ್ ಸಂಜೆ ಉದ್ಯಾನದಲ್ಲಿ ಕುಳಿತಿದ್ದರು. ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ತಾವು ಕ್ರೈಂ ಪೊಲೀಸರೆಂದು ಹೇಳಿಕೊಂಡಿದ್ದರು. ‘ನೀನು ದರೋಡೆ ಗ್ಯಾಂಗ್ ಸದಸ್ಯನಂತೆ ಕಾಣುತ್ತಿದ್ದಿಯಾ. ನಮಗೆ ₹ 30,000 ಕೊಡು. ಇಲ್ಲದಿದ್ದರೆ, ನಿನ್ನ ವಿರುದ್ಧ ಪ್ರಕರಣ ದಾಖಲಿಸುತ್ತೇವೆ’ ಎಂಬುದಾಗಿ ಆರೋಪಿಗಳು ಬೆದರಿಸಿದ್ದರು’ ಎಂದು ತಿಳಿಸಿದರು.</p>.<p>‘ತಮ್ಮ ಬಳಿ ಹಣವಿಲ್ಲ, ಎಟಿಎಂ ಕಾರ್ಡ್ ಮಾತ್ರ ಇರುವುದಾಗಿ ದೂರುದಾರ ಹೇಳಿದ್ದರು. ಪುನಃ ಬೆದರಿಕೆಯೊಡ್ಡಿದ್ದ ಆರೋಪಿಗಳು ದೂರುದಾರರನ್ನು ಕಸ್ತೂರ್ ಬಾ ರಸ್ತೆಯ ಎಚ್ಡಿಎಫ್ಸಿ ಬ್ಯಾಂಕ್ ಎಟಿಎಂ ಘಟಕಕ್ಕೆ ಕರೆದೊಯ್ದಿದ್ದರು. ಅಲ್ಲಿಯೇ ₹ 30,000 ಡ್ರಾ ಮಾಡಿಸಿ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಅಂಬರೀಷ್ ಅವರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>