ಬಂಧಿತರಿಂದ ₹2.50 ಲಕ್ಷ ಮೌಲ್ಯದ ಬೈಕ್, ನಾಲ್ಕು ಮೊಬೈಲ್, ಒಂದು ಚಿನ್ನದ ಉಂಗುರ ಹಾಗೂ ಕರಿಮಣಿಯುಳ್ಳ ಚಿನ್ನದ ಸರವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಆರೋಪಿಗಳು ಕಳವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದರು. ಬಿಡುಗಡೆಯಾದ ಮೇಲೆ ಮತ್ತೆ ಅದೇ ಕೃತ್ಯದಲ್ಲಿ ತೊಡಗಿದ್ದರು. ಕಣ್ಣೂರು ವೃತ್ತದಿಂದ ಬೆಳ್ಳಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು. ಸುಲಿಗೆ ಮಾಡಿದ ಚಿನ್ನಾಭರಣ ಮಾರಾಟ ಮಾಡಿ ವಿಲಾಸಿ ಜೀವನ ನಡೆಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.