<p><strong>ಬೆಂಗಳೂರು:</strong> ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ 19ರಂದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರ ಅನುಕೂಲಕ್ಕಾಗಿ ‘ನಮ್ಮ ಮೆಟ್ರೊ’ ರೈಲು ನಿಗಮವು ಹೆಚ್ಚುವರಿ ಸೇವೆ ಒದಗಿಸಲಿದೆ.</p>.<p>ಕಬ್ಬನ್ ಉದ್ಯಾನದಿಂದ ಬೈಯಪ್ಪನಹಳ್ಳಿ ಕಡೆಗೆಅಂದು ಕೊನೆಯ ರೈಲು ಮಧ್ಯರಾತ್ರಿ 12.06ಕ್ಕೆ, ಮೈಸೂರು ರಸ್ತೆಯ ಕಡೆಗೆ ರಾತ್ರಿ ಕೊನೆಯ ರೈಲು ತಡರಾತ್ರಿ 11.50ಕ್ಕೆ ನಿರ್ಗಮಿಸಲಿದೆ. ಕಬ್ಬನ್ ಉದ್ಯಾನದಿಂದ ನಾಗಸಂದ್ರ ಹಾಗೂ ಯಲಚೇನಹಳ್ಳಿ ನಿಲ್ದಾಣದ ಕಡೆಗೆ ತೆರಳುವವರ ಅನುಕೂಲಕ್ಕಾಗಿ ಮೆಜೆಸ್ಟಿಕ್ ಇಂಟರ್<br />ಚೇಂಜ್ ನಿಲ್ದಾಣದಿಂದ ಕೊನೆಯ ರೈಲು ಮಧ್ಯರಾತ್ರಿ 12ಕ್ಕೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ತಿಳಿಸಿದೆ.</p>.<p>ಕಬ್ಬನ್ ಉದ್ಯಾನದಿಂದ ಯಾವುದೇ ಮೆಟ್ರೊ ನಿಲ್ದಾಣಕ್ಕೆ ಪ್ರಯಾಣ ದರ ₹50 ಇರುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪೇಪರ್ ಟಿಕೆಟ್ ಪರಿಚಯಿಸಿದ್ದು, ಪಂದ್ಯ ಆರಂಭಕ್ಕೂ ಮುನ್ನ ಅಂದರೆ 19ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಯಾವುದೇ ಮೆಟ್ರೊ ನಿಲ್ದಾಣದಲ್ಲಿ ಈ ಕಾಗದದ ಟಿಕೆಟ್ ಖರೀದಿಸಬಹುದು. ಕಬ್ಬನ್ ಉದ್ಯಾನ ನಿಲ್ದಾಣದಲ್ಲಿ ತಡರಾತ್ರಿ 11.45ರವರೆಗೂ ಈ ಮಾದರಿಯ ಟಿಕೆಟ್ ವಿತರಣೆ ಆಗಲಿದೆ. ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಎಂದಿನಂತೆ ಚಾಲ್ತಿಯಲ್ಲಿರುವ ರಿಯಾಯಿತಿ ದರ ಅನ್ವಯ ಆಗಲಿದೆ ಎಂದು ನಿಗಮ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ 19ರಂದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರ ಅನುಕೂಲಕ್ಕಾಗಿ ‘ನಮ್ಮ ಮೆಟ್ರೊ’ ರೈಲು ನಿಗಮವು ಹೆಚ್ಚುವರಿ ಸೇವೆ ಒದಗಿಸಲಿದೆ.</p>.<p>ಕಬ್ಬನ್ ಉದ್ಯಾನದಿಂದ ಬೈಯಪ್ಪನಹಳ್ಳಿ ಕಡೆಗೆಅಂದು ಕೊನೆಯ ರೈಲು ಮಧ್ಯರಾತ್ರಿ 12.06ಕ್ಕೆ, ಮೈಸೂರು ರಸ್ತೆಯ ಕಡೆಗೆ ರಾತ್ರಿ ಕೊನೆಯ ರೈಲು ತಡರಾತ್ರಿ 11.50ಕ್ಕೆ ನಿರ್ಗಮಿಸಲಿದೆ. ಕಬ್ಬನ್ ಉದ್ಯಾನದಿಂದ ನಾಗಸಂದ್ರ ಹಾಗೂ ಯಲಚೇನಹಳ್ಳಿ ನಿಲ್ದಾಣದ ಕಡೆಗೆ ತೆರಳುವವರ ಅನುಕೂಲಕ್ಕಾಗಿ ಮೆಜೆಸ್ಟಿಕ್ ಇಂಟರ್<br />ಚೇಂಜ್ ನಿಲ್ದಾಣದಿಂದ ಕೊನೆಯ ರೈಲು ಮಧ್ಯರಾತ್ರಿ 12ಕ್ಕೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ತಿಳಿಸಿದೆ.</p>.<p>ಕಬ್ಬನ್ ಉದ್ಯಾನದಿಂದ ಯಾವುದೇ ಮೆಟ್ರೊ ನಿಲ್ದಾಣಕ್ಕೆ ಪ್ರಯಾಣ ದರ ₹50 ಇರುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪೇಪರ್ ಟಿಕೆಟ್ ಪರಿಚಯಿಸಿದ್ದು, ಪಂದ್ಯ ಆರಂಭಕ್ಕೂ ಮುನ್ನ ಅಂದರೆ 19ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಯಾವುದೇ ಮೆಟ್ರೊ ನಿಲ್ದಾಣದಲ್ಲಿ ಈ ಕಾಗದದ ಟಿಕೆಟ್ ಖರೀದಿಸಬಹುದು. ಕಬ್ಬನ್ ಉದ್ಯಾನ ನಿಲ್ದಾಣದಲ್ಲಿ ತಡರಾತ್ರಿ 11.45ರವರೆಗೂ ಈ ಮಾದರಿಯ ಟಿಕೆಟ್ ವಿತರಣೆ ಆಗಲಿದೆ. ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಎಂದಿನಂತೆ ಚಾಲ್ತಿಯಲ್ಲಿರುವ ರಿಯಾಯಿತಿ ದರ ಅನ್ವಯ ಆಗಲಿದೆ ಎಂದು ನಿಗಮ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>