<p><strong>ಬೆಂಗಳೂರು</strong>: ‘ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬಳು ಉಡುಗೊರೆ ಆಮಿಷವೊಡ್ಡಿ ₹ 5.20 ಲಕ್ಷ ಪಡೆದು ವಂಚಿಸಿದ್ದಾಳೆ’ ಎಂದು ಆರೋಪಿಸಿ ವಕೀಲೆ ಮಧುಮತಿ ಎಂಬುವರು ಕೇಂದ್ರ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಮಲ್ಲೇಶ್ವರ ನಿವಾಸಿ ಮಧುಮತಿ ನೀಡಿರುವ ದೂರು ಆಧರಿಸಿ ಆರೋಪಿಗಳಾದ ಎಡ್ವಿನ್ ಆಂಡ್ರ್ಯೂ ಹಾಗೂ ನ್ಯಾನ್ಸಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮಧುಮತಿ ಅವರಿಗೆ ಫೇಸ್ಬುಕ್ನಲ್ಲಿ ಎಡ್ವಿನ್ ಆಂಡ್ರ್ಯೂ ಪರಿಚಯವಾಗಿ ಸ್ನೇಹವಾಗಿತ್ತು. ನಂತರ ಇಬ್ಬರೂ ಚಾಟಿಂಗ್ ಮಾಡುತ್ತಿದ್ದರು. ತಮ್ಮ ಪುತ್ರಿಯ ಹುಟ್ಟುಹಬ್ಬ ಇರುವ ವಿಚಾರವನ್ನು ಮಧುಮತಿ, ಆರೋಪಿಗೆ ಹೇಳಿದ್ದರು. ಅವಾಗಲೇ ಎಡ್ವಿನ್, ಶುಭಾಶಯ ಕೋರಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು.’</p>.<p>‘ದೆಹಲಿ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ಜೂ.8ರಂದು ಮಧುಮತಿ ಅವರಿಗೆ ಕರೆ ಮಾಡಿದ್ದ ಇನ್ನೊಬ್ಬ ಯುವತಿ ನ್ಯಾನ್ಸಿ, ‘ನಿಮ್ಮ ಹೆಸರಿಗೆ ಪಾರ್ಸೆಲ್ ಬಂದಿದೆ’ ಎಂದಿದ್ದರು. ಆ ಬಗ್ಗೆ ಎಡ್ವಿನ್ಗೆ ಕರೆ ಮಾಡಿ ವಿಚಾರಿಸಿದಾಗ, ತಾನೇ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿದ್ದರು’ ಎಂದೂ ಪೊಲೀಸರು ಹೇಳಿದರು.</p>.<p>ಪುನಃ ಕರೆ ಮಾಡಿದ್ದ ನ್ಯಾನ್ಸಿ, 'ಪಾರ್ಸೆಲ್ನಲ್ಲಿ ದುಬಾರಿ ಬೆಲೆಯ ವಸ್ತುಗಳಿವೆ. ₹5.20 ಲಕ್ಷ ಶುಲ್ಕ ಪಾವತಿಸಬೇಕು’ ಎಂದಿದ್ದಳು. ಅದನ್ನು ನಂಬಿದ್ದ ಮಧುಮತಿ, ಆರೋಪಿ ಹೇಳಿದ್ದ ಖಾತೆಗೆ ಹಣ ಸಂದಾಯ ಮಾಡಿದ್ದರು. ಅದಾದ ನಂತರ ಆರೋಪಿಗಳಿಬ್ಬರೂ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ದೂರುದಾರರು ಹೇಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬಳು ಉಡುಗೊರೆ ಆಮಿಷವೊಡ್ಡಿ ₹ 5.20 ಲಕ್ಷ ಪಡೆದು ವಂಚಿಸಿದ್ದಾಳೆ’ ಎಂದು ಆರೋಪಿಸಿ ವಕೀಲೆ ಮಧುಮತಿ ಎಂಬುವರು ಕೇಂದ್ರ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಮಲ್ಲೇಶ್ವರ ನಿವಾಸಿ ಮಧುಮತಿ ನೀಡಿರುವ ದೂರು ಆಧರಿಸಿ ಆರೋಪಿಗಳಾದ ಎಡ್ವಿನ್ ಆಂಡ್ರ್ಯೂ ಹಾಗೂ ನ್ಯಾನ್ಸಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮಧುಮತಿ ಅವರಿಗೆ ಫೇಸ್ಬುಕ್ನಲ್ಲಿ ಎಡ್ವಿನ್ ಆಂಡ್ರ್ಯೂ ಪರಿಚಯವಾಗಿ ಸ್ನೇಹವಾಗಿತ್ತು. ನಂತರ ಇಬ್ಬರೂ ಚಾಟಿಂಗ್ ಮಾಡುತ್ತಿದ್ದರು. ತಮ್ಮ ಪುತ್ರಿಯ ಹುಟ್ಟುಹಬ್ಬ ಇರುವ ವಿಚಾರವನ್ನು ಮಧುಮತಿ, ಆರೋಪಿಗೆ ಹೇಳಿದ್ದರು. ಅವಾಗಲೇ ಎಡ್ವಿನ್, ಶುಭಾಶಯ ಕೋರಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು.’</p>.<p>‘ದೆಹಲಿ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ಜೂ.8ರಂದು ಮಧುಮತಿ ಅವರಿಗೆ ಕರೆ ಮಾಡಿದ್ದ ಇನ್ನೊಬ್ಬ ಯುವತಿ ನ್ಯಾನ್ಸಿ, ‘ನಿಮ್ಮ ಹೆಸರಿಗೆ ಪಾರ್ಸೆಲ್ ಬಂದಿದೆ’ ಎಂದಿದ್ದರು. ಆ ಬಗ್ಗೆ ಎಡ್ವಿನ್ಗೆ ಕರೆ ಮಾಡಿ ವಿಚಾರಿಸಿದಾಗ, ತಾನೇ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿದ್ದರು’ ಎಂದೂ ಪೊಲೀಸರು ಹೇಳಿದರು.</p>.<p>ಪುನಃ ಕರೆ ಮಾಡಿದ್ದ ನ್ಯಾನ್ಸಿ, 'ಪಾರ್ಸೆಲ್ನಲ್ಲಿ ದುಬಾರಿ ಬೆಲೆಯ ವಸ್ತುಗಳಿವೆ. ₹5.20 ಲಕ್ಷ ಶುಲ್ಕ ಪಾವತಿಸಬೇಕು’ ಎಂದಿದ್ದಳು. ಅದನ್ನು ನಂಬಿದ್ದ ಮಧುಮತಿ, ಆರೋಪಿ ಹೇಳಿದ್ದ ಖಾತೆಗೆ ಹಣ ಸಂದಾಯ ಮಾಡಿದ್ದರು. ಅದಾದ ನಂತರ ಆರೋಪಿಗಳಿಬ್ಬರೂ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ದೂರುದಾರರು ಹೇಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>