<p><strong>ಬೆಂಗಳೂರು:</strong> ಅಂಗವಿಕಲರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಬದ್ಧವಾಗಿದೆ. ಲೋಪಗಳು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಹೇಳಿದ್ದಾರೆ.</p>.<p>‘ಆಡಳಿತಕ್ಕೆ ಅಂಗವೈಕಲ್ಯ’ ಕುರಿತ ’ಒಳನೋಟ‘ ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಅಂಗವಿಕಲರಿಗೆ ಸೌಲಭ್ಯಗಳನ್ನು ತಲುಪಿಸಲು<br />ವಿಫಲವಾದ ಸಂಸ್ಥೆಗಳಿಂದ ಅನುದಾನ ವಸೂಲು ಮಾಡಿ, ಮುಖ್ಯಸ್ಥರಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಮಹಾಲೇಖಪಾಲರ ವರದಿಯನ್ನು ಆಧರಿಸಿ ಅದರಲ್ಲಿ ಉಲ್ಲೇಖಿಸಿರುವ ಐದು ಪ್ರಕರಣಗಳಲ್ಲಿಯೂ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ದಂಡ ವಸೂಲಾತಿ ಮಾಡಿದ್ದು, ಈಗಾಗಲೇ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಯೋಜನೆಗಳನ್ನು ಆನ್ಲೈನ್ ಮೂಲಕವೇ ಫಲಾನುಭವಿಗಳಿಗೆ ತಲುಪಿಸಲು ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ನೀಡಲಾಗುತ್ತಿದೆ. ಇದು, ಪೂರ್ಣ ಜಾರಿಗೆ ಬಂದ ನಂತರ ಅಕ್ರಮಗಳಿಗೆ ಅವಕಾಶವಿರುವುದಿಲ್ಲ. ಈವರೆಗೂ ಯೋಜನೆಗೆ ಈ ವರ್ಷದ ಮಾರ್ಚ್ನಿಂದ 1.3 ಲಕ್ಷ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಆರು ತಿಂಗಳಲ್ಲಿ ಈ ಕಾರ್ಯ ಮುಗಿಯಲಿದೆ’ ಎಂದು ಯುಡಿಐಡಿ ನೀಡುವ ಕಾರ್ಯ ಮುಗಿಯಲಿದೆ’ ಎಂದಿದ್ದಾರೆ.</p>.<p>ಆಂಗವಿಕಲರಿಗೆ ಸೌಲಭ್ಯ ಕಲ್ಪಿಸುವ ಶಾಲೆಗಳಲ್ಲಿ ಮಾರ್ಗಸೂಚಿಯಂತೆ ಸವಲತ್ತು ಇಲ್ಲದಿರುವುದು ಕಂಡುಬಂದರೆ, ಅಂಥ ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುತ್ತಿದೆ. ಕಡ್ಡಾಯವಾಗಿ ಮೂಲಸೌಕರ್ಯ ಒದಗಿಸಲು ತಾಕೀತು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂಗವಿಕಲರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಬದ್ಧವಾಗಿದೆ. ಲೋಪಗಳು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಹೇಳಿದ್ದಾರೆ.</p>.<p>‘ಆಡಳಿತಕ್ಕೆ ಅಂಗವೈಕಲ್ಯ’ ಕುರಿತ ’ಒಳನೋಟ‘ ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಅಂಗವಿಕಲರಿಗೆ ಸೌಲಭ್ಯಗಳನ್ನು ತಲುಪಿಸಲು<br />ವಿಫಲವಾದ ಸಂಸ್ಥೆಗಳಿಂದ ಅನುದಾನ ವಸೂಲು ಮಾಡಿ, ಮುಖ್ಯಸ್ಥರಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಮಹಾಲೇಖಪಾಲರ ವರದಿಯನ್ನು ಆಧರಿಸಿ ಅದರಲ್ಲಿ ಉಲ್ಲೇಖಿಸಿರುವ ಐದು ಪ್ರಕರಣಗಳಲ್ಲಿಯೂ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ದಂಡ ವಸೂಲಾತಿ ಮಾಡಿದ್ದು, ಈಗಾಗಲೇ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಯೋಜನೆಗಳನ್ನು ಆನ್ಲೈನ್ ಮೂಲಕವೇ ಫಲಾನುಭವಿಗಳಿಗೆ ತಲುಪಿಸಲು ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ನೀಡಲಾಗುತ್ತಿದೆ. ಇದು, ಪೂರ್ಣ ಜಾರಿಗೆ ಬಂದ ನಂತರ ಅಕ್ರಮಗಳಿಗೆ ಅವಕಾಶವಿರುವುದಿಲ್ಲ. ಈವರೆಗೂ ಯೋಜನೆಗೆ ಈ ವರ್ಷದ ಮಾರ್ಚ್ನಿಂದ 1.3 ಲಕ್ಷ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಆರು ತಿಂಗಳಲ್ಲಿ ಈ ಕಾರ್ಯ ಮುಗಿಯಲಿದೆ’ ಎಂದು ಯುಡಿಐಡಿ ನೀಡುವ ಕಾರ್ಯ ಮುಗಿಯಲಿದೆ’ ಎಂದಿದ್ದಾರೆ.</p>.<p>ಆಂಗವಿಕಲರಿಗೆ ಸೌಲಭ್ಯ ಕಲ್ಪಿಸುವ ಶಾಲೆಗಳಲ್ಲಿ ಮಾರ್ಗಸೂಚಿಯಂತೆ ಸವಲತ್ತು ಇಲ್ಲದಿರುವುದು ಕಂಡುಬಂದರೆ, ಅಂಥ ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುತ್ತಿದೆ. ಕಡ್ಡಾಯವಾಗಿ ಮೂಲಸೌಕರ್ಯ ಒದಗಿಸಲು ತಾಕೀತು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>