<p><strong>ಬೆಂಗಳೂರು: </strong>‘ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿರುವ ನಡೆದಿರುವ ಗಲಭೆ ಪೂರ್ವ ಯೋಜಿತ ಮತ್ತು ಸಂಘಟಿತವಾಗಿದ್ದು, ಹಿಂದುಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ’ ಎಂದು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸತ್ಯಶೋಧನಾ ಸಮಿತಿ ವರದಿ ತಿಳಿಸಿದೆ.</p>.<p>ಗಲಭೆಯ ಸಂಬಂಧ ಸಮಿತಿಯು 49 ಪುಟಗಳ ಸತ್ಯಶೋಧನಾ ವರದಿಯನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಸಲ್ಲಿಸಿತು.</p>.<p>ನಿವೃತ್ತ ನ್ಯಾಯಾಧೀಶ ಶ್ರೀಕಾಂತ್ ಡಿ. ಬಬಲಾಡಿ ನೇತೃತ್ವದ ಈ ಸಮಿತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ನಿವೃತ್ತ ಐಎಫ್ಎಸ್ ಅಧಿಕಾರಿಗಳಾದ ಡಾ.ರಾಜು, ಡಾ.ಪ್ರಕಾಶ್, ನಿವೃತ್ತ ಡಿಜಿಪಿ ಎಂ.ಎನ್.ಕೃಷ್ಣಮೂರ್ತಿ, ಪತ್ರಕರ್ತ ಆರ್.ಕೆ.ಮಟ್ಟೂ, ಸಂತೋಷ್ ತಮ್ಮಯ್ಯ ಮುಂತಾದವರು ಇದ್ದಾರೆ.</p>.<p>‘ಇದೊಂದು ಸಾಮಾನ್ಯ ಗಲಭೆ ಅಲ್ಲ. ರಾಜಕೀಯ ಉದ್ದೇಶದ್ದೂ ಅಲ್ಲ. ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು. ಗುಪ್ತಚರ ವಿಭಾಗವನ್ನು ಬಲಪಡಿಸಬೇಕಾಗಿದೆ. ನಾವು ನಿಷ್ಪಕ್ಷವಾಗಿ ತನಿಖೆ ನಡೆಸಿ, ವರದಿ ಸಿದ್ಧಪಡಿಸಿದ್ದೇವೆ. ಸರ್ಕಾರ ನಿರ್ದಾಕ್ಷಿಣ್ಯವಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಮಿತಿಯ ಪರವಾಗಿ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಸುದ್ದಿಗಾರರಿಗೆ ತಿಳಿಸಿದರು.</p>.<p><strong>ವರದಿಯ ಮುಖ್ಯಾಂಶಗಳು:</strong></p>.<p>* ಇಡೀ ಗಲಭೆಯೇ ರಾಜ್ಯದ ವಿರುದ್ಧವಾದುದು. ಸಾಮಾನ್ಯ ಜನತೆ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡುವ ಉದ್ದೇಶ ಈ ಪಿತೂರಿಯ ಹಿಂದೆ ಇದೆ.ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಪಾತ್ರವಿದೆ.</p>.<p>*ಗಲಭೆಯಲ್ಲಿ ಸಂತ್ರಸ್ತರಾದವರನ್ನು ಮಾತನಾಡಿಸಿದಾಗ, ಸ್ಥಳೀಯರು ಗಲಭೆಯಲ್ಲಿ ಪಾಲ್ಗೊಂಡಿರುವುದು ಖಚಿತವಾಗಿದೆ. ಎಫ್ಐಆರ್ನಲ್ಲೂ ಈ ಕುರಿತು ಮಾಹಿತಿಗಳಿವೆ. ಆದ್ದರಿಂದ ಸ್ಥಳೀಯರು ಗಲಭೆಯಲ್ಲಿ ಪಾಲ್ಗೊಂಡಿರುವುದು ಮಾತ್ರವಲ್ಲದೆ, ವ್ಯವಸ್ಥಿತವಾಗಿ ಗಲಭೆ ನಡೆಯುವ ಕುರಿತು ಮುಂಚಿತವಾಗಿಯೇ ಮಾಹಿತಿ ಇತ್ತು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.</p>.<p>* ಹಿಂದುಗಳಿಗೆ ಸೇರಿದ ಮನೆಗಳು ಮತ್ತು ಅಂಗಡಿ ಮುಂಗಟ್ಟುಗಳನ್ನು ಆಯ್ದು ದಾಳಿ ನಡೆಸಲಾಗಿದೆ. ಇದರಿಂದ ಹಿಂದುಗಳನ್ನು ಹೆದರಿಸಿ ಪ್ರದೇಶ ಬಿಟ್ಟು ಹೋಗುವಂತೆ ಮಾಡುವುದು ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿ ರೂಪಿಸುವುದು ಗಲಭೆಕೋರರ ಉದ್ದೇಶವಾಗಿತ್ತು ಎಂದು ಸಮಿತಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿರುವ ನಡೆದಿರುವ ಗಲಭೆ ಪೂರ್ವ ಯೋಜಿತ ಮತ್ತು ಸಂಘಟಿತವಾಗಿದ್ದು, ಹಿಂದುಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ’ ಎಂದು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸತ್ಯಶೋಧನಾ ಸಮಿತಿ ವರದಿ ತಿಳಿಸಿದೆ.</p>.<p>ಗಲಭೆಯ ಸಂಬಂಧ ಸಮಿತಿಯು 49 ಪುಟಗಳ ಸತ್ಯಶೋಧನಾ ವರದಿಯನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಸಲ್ಲಿಸಿತು.</p>.<p>ನಿವೃತ್ತ ನ್ಯಾಯಾಧೀಶ ಶ್ರೀಕಾಂತ್ ಡಿ. ಬಬಲಾಡಿ ನೇತೃತ್ವದ ಈ ಸಮಿತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ನಿವೃತ್ತ ಐಎಫ್ಎಸ್ ಅಧಿಕಾರಿಗಳಾದ ಡಾ.ರಾಜು, ಡಾ.ಪ್ರಕಾಶ್, ನಿವೃತ್ತ ಡಿಜಿಪಿ ಎಂ.ಎನ್.ಕೃಷ್ಣಮೂರ್ತಿ, ಪತ್ರಕರ್ತ ಆರ್.ಕೆ.ಮಟ್ಟೂ, ಸಂತೋಷ್ ತಮ್ಮಯ್ಯ ಮುಂತಾದವರು ಇದ್ದಾರೆ.</p>.<p>‘ಇದೊಂದು ಸಾಮಾನ್ಯ ಗಲಭೆ ಅಲ್ಲ. ರಾಜಕೀಯ ಉದ್ದೇಶದ್ದೂ ಅಲ್ಲ. ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು. ಗುಪ್ತಚರ ವಿಭಾಗವನ್ನು ಬಲಪಡಿಸಬೇಕಾಗಿದೆ. ನಾವು ನಿಷ್ಪಕ್ಷವಾಗಿ ತನಿಖೆ ನಡೆಸಿ, ವರದಿ ಸಿದ್ಧಪಡಿಸಿದ್ದೇವೆ. ಸರ್ಕಾರ ನಿರ್ದಾಕ್ಷಿಣ್ಯವಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಮಿತಿಯ ಪರವಾಗಿ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಸುದ್ದಿಗಾರರಿಗೆ ತಿಳಿಸಿದರು.</p>.<p><strong>ವರದಿಯ ಮುಖ್ಯಾಂಶಗಳು:</strong></p>.<p>* ಇಡೀ ಗಲಭೆಯೇ ರಾಜ್ಯದ ವಿರುದ್ಧವಾದುದು. ಸಾಮಾನ್ಯ ಜನತೆ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡುವ ಉದ್ದೇಶ ಈ ಪಿತೂರಿಯ ಹಿಂದೆ ಇದೆ.ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಪಾತ್ರವಿದೆ.</p>.<p>*ಗಲಭೆಯಲ್ಲಿ ಸಂತ್ರಸ್ತರಾದವರನ್ನು ಮಾತನಾಡಿಸಿದಾಗ, ಸ್ಥಳೀಯರು ಗಲಭೆಯಲ್ಲಿ ಪಾಲ್ಗೊಂಡಿರುವುದು ಖಚಿತವಾಗಿದೆ. ಎಫ್ಐಆರ್ನಲ್ಲೂ ಈ ಕುರಿತು ಮಾಹಿತಿಗಳಿವೆ. ಆದ್ದರಿಂದ ಸ್ಥಳೀಯರು ಗಲಭೆಯಲ್ಲಿ ಪಾಲ್ಗೊಂಡಿರುವುದು ಮಾತ್ರವಲ್ಲದೆ, ವ್ಯವಸ್ಥಿತವಾಗಿ ಗಲಭೆ ನಡೆಯುವ ಕುರಿತು ಮುಂಚಿತವಾಗಿಯೇ ಮಾಹಿತಿ ಇತ್ತು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.</p>.<p>* ಹಿಂದುಗಳಿಗೆ ಸೇರಿದ ಮನೆಗಳು ಮತ್ತು ಅಂಗಡಿ ಮುಂಗಟ್ಟುಗಳನ್ನು ಆಯ್ದು ದಾಳಿ ನಡೆಸಲಾಗಿದೆ. ಇದರಿಂದ ಹಿಂದುಗಳನ್ನು ಹೆದರಿಸಿ ಪ್ರದೇಶ ಬಿಟ್ಟು ಹೋಗುವಂತೆ ಮಾಡುವುದು ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿ ರೂಪಿಸುವುದು ಗಲಭೆಕೋರರ ಉದ್ದೇಶವಾಗಿತ್ತು ಎಂದು ಸಮಿತಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>