<p><strong>ಬೆಂಗಳೂರು</strong>: ಕೆಲಸದಿಂದ ವಜಾಗೊಳಿಸಿದ್ದಕ್ಕೆ ಆಕ್ರೋಶಗೊಂಡಿದ್ದ ಕಾರ್ಮಿಕನೊಬ್ಬ ಕಾರ್ಖಾನೆಯ ವ್ಯವಸ್ಥಾಪಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಪೀಣ್ಯ ಎರಡನೇ ಹಂತದ ತಿಗಳರಪಾಳ್ಯದಲ್ಲಿ ಸೋಮವಾರ ರಾತ್ರಿ ನಡೆದಿದೆ.</p>.<p>ಪವರ್ ಪ್ಲಾಸ್ಟಿಕ್ ಕಾರ್ಖಾನೆಯ ವ್ಯವಸ್ಥಾಪಕ ರಾಹುಲ್ (38) ಕೊಲೆಯಾದವರು.</p>.<p>ಕೃತ್ಯ ಎಸಗಿದ ಆರೋಪಿ, ಯಾದಗಿರಿಯ ಹನುಮಂತಪ್ಪ ಎಂಬಾತನನ್ನು ರಾಜಗೋಪಾಲನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕೊಲೆಯಾದ ರಾಹುಲ್ ಸಹೋದರ ರೋಹಿತ್ ನೀಡಿದ ದೂರು ಆಧರಿಸಿ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಉತ್ತರಪ್ರದೇಶದ ರಾಹುಲ್ ಅವರು ಪವರ್ ಪ್ಲಾಸ್ಟಿಕ್ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲವು ವರ್ಷದಿಂದ ಕೆಲಸ ಮಾಡುತ್ತಿದ್ದರು. ಕಂಪನಿಯಲ್ಲಿ ಸುಮಾರು 30 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆರೋಪಿ ಹನುಮಂತಪ್ಪ ಏಳು ವರ್ಷಗಳಿಂದ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<p>ಆರೋಪಿ ಪದೇ ಪದೇ ಕೆಲಸಕ್ಕೆ ಗೈರಾಗುತ್ತಿದ್ದ. ಕೆಲಸಕ್ಕೆ ಗೈರಾಗುತ್ತಿರುವುದನ್ನು ವ್ಯವಸ್ಥಾಪಕ ರಾಹುಲ್ ಪ್ರಶ್ನಿಸಿದ್ದರು. ಅಲ್ಲದೇ ಕೆಲಸದಿಂದ ವಜಾ ಮಾಡಿದ್ದರು. ಇದರಿಂದ ಅಸಮಾಧಾನಗೊಂಡಿದ್ದ, ಆರೋಪಿ ಬೆದರಿಕೆ ಹಾಕಿ ಹೋಗಿದ್ದ ಎಂದು ಪೊಲೀಸರು ಹೇಳಿದರು.</p>.<p>ಸೋಮವಾರ ರಾತ್ರಿ ಕಾರ್ಖಾನೆ ಆವರಣಕ್ಕೆ ಬಂದಿದ್ದ ಹನುಮಂತಪ್ಪ, ಸಮೀಪದಲ್ಲೇ ನಿಂತಿದ್ದ ರಾಹುಲ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದ. ಆಗ ತಪ್ಪಿಸಿಕೊಳ್ಳಲು ಯತ್ನಿಸಿದ ಅವರನ್ನು ಆರೋಪಿ ಬೆನ್ನಟ್ಟಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಹುಲ್ ಅವರನ್ನು ಕಾರ್ಮಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ಬೆಳಿಗ್ಗೆ ರಾಹುಲ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಲಸದಿಂದ ವಜಾಗೊಳಿಸಿದ್ದಕ್ಕೆ ಆಕ್ರೋಶಗೊಂಡಿದ್ದ ಕಾರ್ಮಿಕನೊಬ್ಬ ಕಾರ್ಖಾನೆಯ ವ್ಯವಸ್ಥಾಪಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಪೀಣ್ಯ ಎರಡನೇ ಹಂತದ ತಿಗಳರಪಾಳ್ಯದಲ್ಲಿ ಸೋಮವಾರ ರಾತ್ರಿ ನಡೆದಿದೆ.</p>.<p>ಪವರ್ ಪ್ಲಾಸ್ಟಿಕ್ ಕಾರ್ಖಾನೆಯ ವ್ಯವಸ್ಥಾಪಕ ರಾಹುಲ್ (38) ಕೊಲೆಯಾದವರು.</p>.<p>ಕೃತ್ಯ ಎಸಗಿದ ಆರೋಪಿ, ಯಾದಗಿರಿಯ ಹನುಮಂತಪ್ಪ ಎಂಬಾತನನ್ನು ರಾಜಗೋಪಾಲನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕೊಲೆಯಾದ ರಾಹುಲ್ ಸಹೋದರ ರೋಹಿತ್ ನೀಡಿದ ದೂರು ಆಧರಿಸಿ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಉತ್ತರಪ್ರದೇಶದ ರಾಹುಲ್ ಅವರು ಪವರ್ ಪ್ಲಾಸ್ಟಿಕ್ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲವು ವರ್ಷದಿಂದ ಕೆಲಸ ಮಾಡುತ್ತಿದ್ದರು. ಕಂಪನಿಯಲ್ಲಿ ಸುಮಾರು 30 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆರೋಪಿ ಹನುಮಂತಪ್ಪ ಏಳು ವರ್ಷಗಳಿಂದ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<p>ಆರೋಪಿ ಪದೇ ಪದೇ ಕೆಲಸಕ್ಕೆ ಗೈರಾಗುತ್ತಿದ್ದ. ಕೆಲಸಕ್ಕೆ ಗೈರಾಗುತ್ತಿರುವುದನ್ನು ವ್ಯವಸ್ಥಾಪಕ ರಾಹುಲ್ ಪ್ರಶ್ನಿಸಿದ್ದರು. ಅಲ್ಲದೇ ಕೆಲಸದಿಂದ ವಜಾ ಮಾಡಿದ್ದರು. ಇದರಿಂದ ಅಸಮಾಧಾನಗೊಂಡಿದ್ದ, ಆರೋಪಿ ಬೆದರಿಕೆ ಹಾಕಿ ಹೋಗಿದ್ದ ಎಂದು ಪೊಲೀಸರು ಹೇಳಿದರು.</p>.<p>ಸೋಮವಾರ ರಾತ್ರಿ ಕಾರ್ಖಾನೆ ಆವರಣಕ್ಕೆ ಬಂದಿದ್ದ ಹನುಮಂತಪ್ಪ, ಸಮೀಪದಲ್ಲೇ ನಿಂತಿದ್ದ ರಾಹುಲ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದ. ಆಗ ತಪ್ಪಿಸಿಕೊಳ್ಳಲು ಯತ್ನಿಸಿದ ಅವರನ್ನು ಆರೋಪಿ ಬೆನ್ನಟ್ಟಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಹುಲ್ ಅವರನ್ನು ಕಾರ್ಮಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ಬೆಳಿಗ್ಗೆ ರಾಹುಲ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>