<p><strong>ಬೆಂಗಳೂರು:</strong> ‘ಕೋವಿಡ್ 19 ಸಂಕಷ್ಟ ಎದುರಿಸುವಲ್ಲಿ ಹಾಗೂ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಹಿತ ಕಾಪಾಡಲು ಕೇಂದ್ರ– ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.</p>.<p>ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕೋವಿಡ್ -19ನಿಂದ ಇಡೀ ದೇಶದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಕೂಲಿ ಕಾರ್ಮಿಕರು ತೊಂದರೆಯಲ್ಲಿದ್ದಾರೆ.ಆದರೆ, ಸರ್ಕಾರ ತಲೆಕೆಡಿಸಿಕೊಂಡಿಲ್ಲ’ ಎಂದರು.</p>.<p>‘ಕೊರೊನಾ ಪ್ರಕರಣಗಳು ಕಡಿಮೆ ಇದ್ದಾಗ ಲಾಕ್ಡೌನ್ ಬಿಗಿಗೊಳಿಸಿ, ಪ್ರಕರಣ ಹೆಚ್ಚಿದ ಬಳಿಕ ನಿರ್ಬಂಧ ಸಡಿಲಿಸಲಾಗಿದೆ. ಜನರಿಗೆ ತೊಂದರೆ ಮಾಡಲೆಂದೇ ಕೇಂದ್ರ ಈ ನಿರ್ಣಯ ತೆಗೆದು<br />ಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p><strong>ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ<br />ಬೆಂಗಳೂರು: </strong>ಯೋಗಗಂಗೋತ್ರಿ ಸಂಸ್ಥೆಯು ರಾಮನಗರ ಜಿಲ್ಲೆಯ ಸುಗ್ಗನಹಳ್ಳಿಯಲ್ಲಿ ನಡೆಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ವಿದ್ಯಾರ್ಥಿ ನಿಲಯ ‘ಬೆಳಕು’ ಆಶ್ರಮಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.</p>.<p>ಗ್ರಾಮೀಣ ಭಾಗದ ಐದನೇ ತರಗತಿಯಿಂದ ಎಸ್ಸೆಸ್ಸೆಲ್ಸಿ ವರೆಗಿನ ಬಡ ಹಾಗೂ ನಿರಾಶ್ರಿತ ಗಂಡು ಮಕ್ಕಳು ಪ್ರವೇಶ ಪಡೆಯಬಹುದು. ಆಶ್ರಮದಲ್ಲಿ ಉಚಿತ ವಸತಿ, ಊಟ ಹಾಗೂ ಶಿಕ್ಷಣ ವೆಚ್ಚ ಭರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎನ್.ಆರಾಧ್ಯ ತಿಳಿಸಿದ್ದಾರೆ. <strong>ಸಂಪರ್ಕ: 8884646108</strong></p>.<p><strong>ಕಲಾಪ ಸ್ಥಗಿತ: ಸಿ.ಜೆ.ಎಚ್ಚರಿಕೆ<br />ಬೆಂಗಳೂರು: </strong>‘ವೈಯಕ್ತಿಕ ಅಂತರ ಕಾಯ್ದುಕೊಳ್ಳುವಲ್ಲಿ ವಕೀಲರು ನಿರ್ಲಕ್ಷ್ಯ ತೋರುತ್ತಿದ್ದು; ಒಂದು ವೇಳೆ ಸೂಕ್ತ ಸಹಕಾರ ಮತ್ತು ಬೆಂಬಲ ನೀಡದೆ ಹೋದರೆ ಕೋರ್ಟ್ ಕಲಾಪ ಸ್ಥಗಿತಗೊಳಿಸಬೇಕಾಗುತ್ತದೆ’ ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.</p>.<p>ಲಾಕ್ ಡೌನ್ ನಿಯಮ ಸಡಿಲಿಕೆ ನಂತರ ಸೋಮವಾರ ಹೈಕೋರ್ಟ್ನ ಪ್ರಧಾನಪೀಠ ಹಾಗೂ ನಗರದ ವಿಚಾರಣಾ ನ್ಯಾಯಾಲಯಗಳಲ್ಲಿ ಸೀಮಿತ ಪ್ರಮಾಣದಲ್ಲಿ ಕಲಾಪ ಪುನರಾರಂಭಕ್ಕೆ ಚಾಲನೆ ನೀಡಲಾಯಿತು.</p>.<p>ವಕೀಲರಿಗೆ ಹಾಗೂ ಅವರ ಕ್ಲರ್ಕ್ ಗಳಿಗೆ ಮಾತ್ರವೇ ಒಳಬಿಡಲಾಯಿತು. ಸಾಕಷ್ಟು ವಕೀಲರು ಮತ್ತು ಕಕ್ಷಿದಾರರಿಗೆ ಪ್ರವೇಶ ನಿರಾಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ 19 ಸಂಕಷ್ಟ ಎದುರಿಸುವಲ್ಲಿ ಹಾಗೂ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಹಿತ ಕಾಪಾಡಲು ಕೇಂದ್ರ– ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.</p>.<p>ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕೋವಿಡ್ -19ನಿಂದ ಇಡೀ ದೇಶದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಕೂಲಿ ಕಾರ್ಮಿಕರು ತೊಂದರೆಯಲ್ಲಿದ್ದಾರೆ.ಆದರೆ, ಸರ್ಕಾರ ತಲೆಕೆಡಿಸಿಕೊಂಡಿಲ್ಲ’ ಎಂದರು.</p>.<p>‘ಕೊರೊನಾ ಪ್ರಕರಣಗಳು ಕಡಿಮೆ ಇದ್ದಾಗ ಲಾಕ್ಡೌನ್ ಬಿಗಿಗೊಳಿಸಿ, ಪ್ರಕರಣ ಹೆಚ್ಚಿದ ಬಳಿಕ ನಿರ್ಬಂಧ ಸಡಿಲಿಸಲಾಗಿದೆ. ಜನರಿಗೆ ತೊಂದರೆ ಮಾಡಲೆಂದೇ ಕೇಂದ್ರ ಈ ನಿರ್ಣಯ ತೆಗೆದು<br />ಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p><strong>ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ<br />ಬೆಂಗಳೂರು: </strong>ಯೋಗಗಂಗೋತ್ರಿ ಸಂಸ್ಥೆಯು ರಾಮನಗರ ಜಿಲ್ಲೆಯ ಸುಗ್ಗನಹಳ್ಳಿಯಲ್ಲಿ ನಡೆಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ವಿದ್ಯಾರ್ಥಿ ನಿಲಯ ‘ಬೆಳಕು’ ಆಶ್ರಮಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.</p>.<p>ಗ್ರಾಮೀಣ ಭಾಗದ ಐದನೇ ತರಗತಿಯಿಂದ ಎಸ್ಸೆಸ್ಸೆಲ್ಸಿ ವರೆಗಿನ ಬಡ ಹಾಗೂ ನಿರಾಶ್ರಿತ ಗಂಡು ಮಕ್ಕಳು ಪ್ರವೇಶ ಪಡೆಯಬಹುದು. ಆಶ್ರಮದಲ್ಲಿ ಉಚಿತ ವಸತಿ, ಊಟ ಹಾಗೂ ಶಿಕ್ಷಣ ವೆಚ್ಚ ಭರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎನ್.ಆರಾಧ್ಯ ತಿಳಿಸಿದ್ದಾರೆ. <strong>ಸಂಪರ್ಕ: 8884646108</strong></p>.<p><strong>ಕಲಾಪ ಸ್ಥಗಿತ: ಸಿ.ಜೆ.ಎಚ್ಚರಿಕೆ<br />ಬೆಂಗಳೂರು: </strong>‘ವೈಯಕ್ತಿಕ ಅಂತರ ಕಾಯ್ದುಕೊಳ್ಳುವಲ್ಲಿ ವಕೀಲರು ನಿರ್ಲಕ್ಷ್ಯ ತೋರುತ್ತಿದ್ದು; ಒಂದು ವೇಳೆ ಸೂಕ್ತ ಸಹಕಾರ ಮತ್ತು ಬೆಂಬಲ ನೀಡದೆ ಹೋದರೆ ಕೋರ್ಟ್ ಕಲಾಪ ಸ್ಥಗಿತಗೊಳಿಸಬೇಕಾಗುತ್ತದೆ’ ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.</p>.<p>ಲಾಕ್ ಡೌನ್ ನಿಯಮ ಸಡಿಲಿಕೆ ನಂತರ ಸೋಮವಾರ ಹೈಕೋರ್ಟ್ನ ಪ್ರಧಾನಪೀಠ ಹಾಗೂ ನಗರದ ವಿಚಾರಣಾ ನ್ಯಾಯಾಲಯಗಳಲ್ಲಿ ಸೀಮಿತ ಪ್ರಮಾಣದಲ್ಲಿ ಕಲಾಪ ಪುನರಾರಂಭಕ್ಕೆ ಚಾಲನೆ ನೀಡಲಾಯಿತು.</p>.<p>ವಕೀಲರಿಗೆ ಹಾಗೂ ಅವರ ಕ್ಲರ್ಕ್ ಗಳಿಗೆ ಮಾತ್ರವೇ ಒಳಬಿಡಲಾಯಿತು. ಸಾಕಷ್ಟು ವಕೀಲರು ಮತ್ತು ಕಕ್ಷಿದಾರರಿಗೆ ಪ್ರವೇಶ ನಿರಾಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>