ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಾಶವಾಣಿ ರಾಷ್ಟ್ರೀಯ ಕವಿ ಸಮ್ಮೇಳನಕ್ಕೆ ಸಂತೇಬೆನ್ನೂರು ಫೈಜ್ನಟ್ರಾಜ್‌

Published 2 ಜನವರಿ 2024, 15:45 IST
Last Updated 2 ಜನವರಿ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ಆಕಾಶವಾಣಿಯು ಜಾರ್ಖಂಡ್‌ನ ರಾಂಚಿಯಲ್ಲಿ ಜ.5ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಕವಿ ಸಮ್ಮೇಳನದಲ್ಲಿ ಕವಿ ಸಂತೇಬೆನ್ನೂರು ಫೈಜ್ನಟ್ರಾಜ್‌ ಕನ್ನಡ ಭಾಷೆಯನ್ನು ಪ್ರತಿನಿಧಿಸಲಿದ್ದಾರೆ.

ಆಕಾಶವಾಣಿಯು 1956 ರಿಂದ ಪ್ರತಿವರ್ಷ ಭಾರತೀಯ ಭಾಷೆಗಳ ರಾಷ್ಟ್ರೀಯ ಕವಿ ಸಮ್ಮೇಳನ ಆಯೋಜಿಸುತ್ತಾ ಬಂದಿದೆ. ಬೇರೆ ಬೇರೆ ರಾಜ್ಯಗಳಿಂದ ವಿವಿಧ ಭಾಷೆಗಳನ್ನು ಪ್ರತಿನಿಧಿಸುವ ಕವಿಗಳು ಭಾಗವಹಿಸಲಿದ್ದು, ಸಂತೇಬೆನ್ನೂರು ಫೈಜ್ನಟ್ರಾಜ್‌ ಕನ್ನಡ ಕವನ ವಾಚನ ಮಾಡಲಿದ್ದಾರೆ.

ಈ ಕಾರ್ಯಕ್ರಮ ಗಣರಾಜ್ಯೋತ್ಸವದ ಮುನ್ನಾದಿನ ಆಕಾಶವಾಣಿಯ ಎಲ್ಲ ಕೇಂದ್ರಗಳಿಂದ ಆಯಾ ರಾಜ್ಯಗಳ ಭಾಷೆಗಳಲ್ಲಿ ಪ್ರಸಾರವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT