ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಶ್ಯೂರಿಟಿ; ರೌಡಿ ಸೇರಿ ನಾಲ್ವರು ವಶಕ್ಕೆ

Last Updated 7 ಜೂನ್ 2022, 20:21 IST
ಅಕ್ಷರ ಗಾತ್ರ

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಜಾಮೀನು ಮಂಜೂರು ಮಾಡಿಸಲು ನಕಲಿ ಶ್ಯೂರಿಟಿ ನೀಡಿದ್ದ ಆರೋಪದಡಿ ರೌಡಿ ಸೇರಿ ನಾಲ್ವರನ್ನು ಯಶವಂತಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ನಕಲಿ ದಾಖಲೆ ಹಾಜರುಪಡಿಸಿದ್ದ ರೌಡಿ ಆಕಾಶ್, ಮಹೇಶ್, ಲೋಕೇಶ್ ಹಾಗೂ ರಾಮಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪ್ರಕರಣವೊಂದರಲ್ಲಿ ಆರೋಪಿ ಆಗಿದ್ದ ರೌಡಿ ಆಕಾಶ್‌ಗೆ ಜಾಮೀನು ಮಂಜೂರು ಮಾಡಿಸಿಕೊಳ್ಳಲು ಆರೋಪಿಗಳು ಉತ್ತರ ವಿಭಾಗದ ಡಿಸಿಪಿ ಕಚೇರಿಗೆ ಬಂದಿದ್ದರು. ಶ್ಯೂರಿಟಿಗಾಗಿ ದಾಖಲೆಗಳನ್ನು ಹಾಜರುಪಡಿಸಿದ್ದರು. ದಾಖಲೆಗಳು ನಕಲಿ ಎಂದು ಪರಿಶೀಲನೆ ವೇಳೆ ಗೊತ್ತಾಯಿತು. ಸಿಬ್ಬಂದಿಯಿಂದ ದೂರು ಪಡೆದು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT