<p><strong>ಬೆಂಗಳೂರು</strong>: ಮಹದೇವಪುರದ ವಿ.ಆರ್.ಮಾಲ್ಗೆ ಸೋಮವಾರ ಮಧ್ಯಾಹ್ನ 3ರ ಸುಮಾರಿಗೆ ದುಷ್ಕರ್ಮಿಗಳು ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಮಾಲ್ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.</p>.<p>ಇ–ಮೇಲ್ನಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಅದನ್ನು ಗಮನಿಸಿದ ಮಾಲ್ನ ಸಿಬ್ಬಂದಿ ಗ್ರಾಹಕರಿಗೆ ತಿಳಿಸಿ, ಮುನ್ನೆಚ್ಚರಿಕೆ ಕ್ರಮಮವಾಗಿ ಎಲ್ಲರನ್ನೂ ಹೊರಕ್ಕೆ ಕಳುಹಿಸಿದ್ದರು. ಬಳಿಕ, ಪೊಲೀಸರಿಗೂ ಮಾಹಿತಿ ನೀಡಿದ್ದರು.</p>.<p>ಮಾಲ್ಗೆ ಬಂದ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.</p>.<p>‘ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವೈಟ್ಫೀಲ್ಡ್ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p><strong>ಇ–ಮೇಲ್ನಲ್ಲಿ ಏನಿತ್ತು?:</strong> ‘ನೀವು ಯಾರೂ ಬದುಕಲು ಅರ್ಹರಲ್ಲ. ಈ ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ’ ಎಂಬುದಾಗಿ ಇ–ಮೇಲ್ನಲ್ಲಿ ಬರೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹದೇವಪುರದ ವಿ.ಆರ್.ಮಾಲ್ಗೆ ಸೋಮವಾರ ಮಧ್ಯಾಹ್ನ 3ರ ಸುಮಾರಿಗೆ ದುಷ್ಕರ್ಮಿಗಳು ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಮಾಲ್ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.</p>.<p>ಇ–ಮೇಲ್ನಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಅದನ್ನು ಗಮನಿಸಿದ ಮಾಲ್ನ ಸಿಬ್ಬಂದಿ ಗ್ರಾಹಕರಿಗೆ ತಿಳಿಸಿ, ಮುನ್ನೆಚ್ಚರಿಕೆ ಕ್ರಮಮವಾಗಿ ಎಲ್ಲರನ್ನೂ ಹೊರಕ್ಕೆ ಕಳುಹಿಸಿದ್ದರು. ಬಳಿಕ, ಪೊಲೀಸರಿಗೂ ಮಾಹಿತಿ ನೀಡಿದ್ದರು.</p>.<p>ಮಾಲ್ಗೆ ಬಂದ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.</p>.<p>‘ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವೈಟ್ಫೀಲ್ಡ್ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p><strong>ಇ–ಮೇಲ್ನಲ್ಲಿ ಏನಿತ್ತು?:</strong> ‘ನೀವು ಯಾರೂ ಬದುಕಲು ಅರ್ಹರಲ್ಲ. ಈ ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ’ ಎಂಬುದಾಗಿ ಇ–ಮೇಲ್ನಲ್ಲಿ ಬರೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>