<p><strong>ಬೆಂಗಳೂರು</strong>: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದ ಸುಮನ್, ಗುಲಾಲ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿ, ₹1.50 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.</p>.<p>‘ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸುಮನ್ ಹಾಗೂ ಗುಲಾಲ್ ಅವರಿಗೆ ಜನವರಿ 28ರಂದು ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ರೈಲಿನಲ್ಲಿ ಬರುವ ವೇಳೆ ಒಂದೂವರೆ ಲಕ್ಷ ರೂಪಾಯಿ ಮೊತ್ತದ ₹ 500 ಮುಖಬೆಲೆಯ ನೋಟುಗಳು ಸಿಕ್ಕಿವೆ. ನಗರಕ್ಕೆ ಬಂದ ಬಳಿಕ ಈ ಹಣವನ್ನು ತಮ್ಮ ಗ್ರಾಮಕ್ಕೆ ಕಳುಹಿಸಲು ಮುಂದಾಗಿದ್ದರು‘ ಎಂದು ಪೊಲೀಸರು ತಿಳಿಸಿದರು.</p>.<p>‘ಕುಮಾರ್ ಎಂಬುವರ ಬಳಿ ₹ 70 ಸಾವಿರ ನೀಡಿ, ತಮ್ಮ ಖಾತೆಗೆ ವರ್ಗಾಯಿಸುವಂತೆ ಸುಮನ್ ಹೇಳಿದ್ದ. ನೋಟು ಎಣಿಸುವ ವೇಳೆ ಸರದಿ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದ ಕಾರಣ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಖೋಟಾ ನೋಟು ಎಂಬುದು ಗೊತ್ತಾಯಿತು. ಈ ಬಗ್ಗೆ ಕುಮಾರ್ ನೀಡಿದ ದೂರು ಆಧರಿಸಿ ಮೂವರನ್ನೂ ಬಂಧಿಸಿ, ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದ ಸುಮನ್, ಗುಲಾಲ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿ, ₹1.50 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.</p>.<p>‘ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸುಮನ್ ಹಾಗೂ ಗುಲಾಲ್ ಅವರಿಗೆ ಜನವರಿ 28ರಂದು ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ರೈಲಿನಲ್ಲಿ ಬರುವ ವೇಳೆ ಒಂದೂವರೆ ಲಕ್ಷ ರೂಪಾಯಿ ಮೊತ್ತದ ₹ 500 ಮುಖಬೆಲೆಯ ನೋಟುಗಳು ಸಿಕ್ಕಿವೆ. ನಗರಕ್ಕೆ ಬಂದ ಬಳಿಕ ಈ ಹಣವನ್ನು ತಮ್ಮ ಗ್ರಾಮಕ್ಕೆ ಕಳುಹಿಸಲು ಮುಂದಾಗಿದ್ದರು‘ ಎಂದು ಪೊಲೀಸರು ತಿಳಿಸಿದರು.</p>.<p>‘ಕುಮಾರ್ ಎಂಬುವರ ಬಳಿ ₹ 70 ಸಾವಿರ ನೀಡಿ, ತಮ್ಮ ಖಾತೆಗೆ ವರ್ಗಾಯಿಸುವಂತೆ ಸುಮನ್ ಹೇಳಿದ್ದ. ನೋಟು ಎಣಿಸುವ ವೇಳೆ ಸರದಿ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದ ಕಾರಣ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಖೋಟಾ ನೋಟು ಎಂಬುದು ಗೊತ್ತಾಯಿತು. ಈ ಬಗ್ಗೆ ಕುಮಾರ್ ನೀಡಿದ ದೂರು ಆಧರಿಸಿ ಮೂವರನ್ನೂ ಬಂಧಿಸಿ, ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>