<p><strong>ಬೆಂಗಳೂರು:</strong> ನಕಲಿ ದಾಖಲೆಗಳ ಮೂಲಕ ಆಸ್ಪತ್ರೆ ನಡೆಸುತ್ತಿದ್ದ ಎರಡು ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.</p>.<p>ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯ್ದೆಯ (ಕೆಪಿಎಂಇ) ನಿಯಮಗಳನ್ನು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ನಂತರ ಸೂಚಿಸಿದ್ದಾರೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಮಂಡೂರು ಗ್ರಾಮದ ಕೆ.ಇ.ಬಿ ನಿಲ್ದಾಣದ ಬಳಿಯಿರುವ ಶ್ರೀನಿಧಿ ಟ್ರಸ್ಟ್ ಪುನರ್ವಸತಿ ಕೇಂದ್ರವು, ‘ಎಸ್. ಅಂಬರೀಶ್ ಅವರ ಕ್ಲಿನಿಕ್-ಪಾಲಿಕ್ಲಿನಿಕ್-ಅಲೋಪಥಿ ವೈದ್ಯಕೀಯ ವ್ಯವಸ್ಥೆ’ಯಲ್ಲಿ ಸಮಾಲೋಚನೆ ಸೇವೆಗೆ ಮಾತ್ರ 2021ರ ಏಪ್ರಿಲ್ 1ರಂದು ನೋಂದಣಿಯಾಗಿದೆ.</p>.<p>ಹಿರಂಡಹಳ್ಳಿ ಗ್ರಾಮದಲ್ಲಿರುವ ರೈಸ್ ಫೌಂಡೇಶನ್ ಪುನರ್ವಸತಿ ಸಂಸ್ಥೆಯು ‘ಚಿರಂಜೀವಿ ಎ.ಆರ್. ಅವರ ಕ್ಲಿನಿಕ್/ಪಾಲಿಕ್ಲಿನಿಕ್-ಅಲೋಪಥಿ ವೈದ್ಯಕೀಯ ವ್ಯವಸ್ಥೆ’ಯಲ್ಲಿ ಸಮಾಲೋಚನೆ ಸೇವೆಗಾಗಿ ಮಾತ್ರ 2021ರ ಏಪ್ರಿಲ್ 7ರಂದು ಕೆಪಿಎಂಇ ವೆಬ್ಸೈಟ್ನಲ್ಲಿ ನೋಂದಣಿಯಾಗಿದೆ. ಈ ಸಂಸ್ಥೆಯವರು ನೀಡಿರುವ ದಾಖಲಾತಿ ಪ್ರತಿಯಲ್ಲಿ ‘ಬಾಲಕೃಷ್ಣ ಅವರ ಅಲೋಪಥಿ ವೈದ್ಯಕೀಯ ಆಸ್ಪತ್ರೆ’ ಎಂದಿದೆ. </p>.<p>‘ಈ ಎರಡೂ ಸಂಸ್ಥೆಗಳ ದಾಖಲಾತಿಗಳನ್ನು ಗಮನಿಸಿದಾಗ, ಸಂಸ್ಥೆಯವರು ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಅನಧಿಕೃತವಾಗಿ ಸಂಸ್ಥೆಯನ್ನು ನಡೆಸುತ್ತಿರುವುದು ಕಂಡುಬಂದಿದೆ. ಈ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಕಲಿ ದಾಖಲೆಗಳ ಮೂಲಕ ಆಸ್ಪತ್ರೆ ನಡೆಸುತ್ತಿದ್ದ ಎರಡು ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.</p>.<p>ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯ್ದೆಯ (ಕೆಪಿಎಂಇ) ನಿಯಮಗಳನ್ನು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ನಂತರ ಸೂಚಿಸಿದ್ದಾರೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಮಂಡೂರು ಗ್ರಾಮದ ಕೆ.ಇ.ಬಿ ನಿಲ್ದಾಣದ ಬಳಿಯಿರುವ ಶ್ರೀನಿಧಿ ಟ್ರಸ್ಟ್ ಪುನರ್ವಸತಿ ಕೇಂದ್ರವು, ‘ಎಸ್. ಅಂಬರೀಶ್ ಅವರ ಕ್ಲಿನಿಕ್-ಪಾಲಿಕ್ಲಿನಿಕ್-ಅಲೋಪಥಿ ವೈದ್ಯಕೀಯ ವ್ಯವಸ್ಥೆ’ಯಲ್ಲಿ ಸಮಾಲೋಚನೆ ಸೇವೆಗೆ ಮಾತ್ರ 2021ರ ಏಪ್ರಿಲ್ 1ರಂದು ನೋಂದಣಿಯಾಗಿದೆ.</p>.<p>ಹಿರಂಡಹಳ್ಳಿ ಗ್ರಾಮದಲ್ಲಿರುವ ರೈಸ್ ಫೌಂಡೇಶನ್ ಪುನರ್ವಸತಿ ಸಂಸ್ಥೆಯು ‘ಚಿರಂಜೀವಿ ಎ.ಆರ್. ಅವರ ಕ್ಲಿನಿಕ್/ಪಾಲಿಕ್ಲಿನಿಕ್-ಅಲೋಪಥಿ ವೈದ್ಯಕೀಯ ವ್ಯವಸ್ಥೆ’ಯಲ್ಲಿ ಸಮಾಲೋಚನೆ ಸೇವೆಗಾಗಿ ಮಾತ್ರ 2021ರ ಏಪ್ರಿಲ್ 7ರಂದು ಕೆಪಿಎಂಇ ವೆಬ್ಸೈಟ್ನಲ್ಲಿ ನೋಂದಣಿಯಾಗಿದೆ. ಈ ಸಂಸ್ಥೆಯವರು ನೀಡಿರುವ ದಾಖಲಾತಿ ಪ್ರತಿಯಲ್ಲಿ ‘ಬಾಲಕೃಷ್ಣ ಅವರ ಅಲೋಪಥಿ ವೈದ್ಯಕೀಯ ಆಸ್ಪತ್ರೆ’ ಎಂದಿದೆ. </p>.<p>‘ಈ ಎರಡೂ ಸಂಸ್ಥೆಗಳ ದಾಖಲಾತಿಗಳನ್ನು ಗಮನಿಸಿದಾಗ, ಸಂಸ್ಥೆಯವರು ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಅನಧಿಕೃತವಾಗಿ ಸಂಸ್ಥೆಯನ್ನು ನಡೆಸುತ್ತಿರುವುದು ಕಂಡುಬಂದಿದೆ. ಈ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>