ಬೆಂಗಳೂರು: ‘ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ‘ಕಾಂಗ್ರೆಸ್ ಐಟಿ ಸೆಲ್‘ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಅಪರಿಚಿತರು, ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ನಗರದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
‘ಕಾಂಗ್ರೆಸ್ ಪಕ್ಷದ ಅವಹೇಳನಕಾರಿ ಪೋಸ್ಟ್ಗಳನ್ನುನಕಲಿ ಖಾತೆಯಲ್ಲಿ ಪ್ರಕಟಿಸಲಾಗುತ್ತಿದೆ. ಅದರಿಂದ ಪಕ್ಷದ ಘನತೆಗೆ ಧಕ್ಕೆ ತರಲಾಗುತ್ತಿದೆ. ಖಾತೆ ಸೃಷ್ಟಿಸಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು’ ಎಂದು ಮುಕುಂದರಾಜ್ ಒತ್ತಾಯಿಸಿದ್ದಾರೆ.
ಪೊಲೀಸರು, ‘ದೂರು ಸ್ವೀಕರಿಸಿ ಪರಿಶೀಲಿಸುತ್ತಿದ್ದೇವೆ’ ಎಂದರು.