<p><strong>ಬೆಂಗಳೂರು: </strong>ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ‘ನಂದಿನಿ’ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರುತ್ತಿದ್ದ ಆರೋಪ ದಡಿ ನಗರದ ‘ಶ್ರುತಿ ಮಾರ್ಕೆಟಿಂಗ್ ಕಾರ್ಪೋರೇಷನ್’ ಏಜೆನ್ಸಿ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ನಕಲಿ ತುಪ್ಪ ಮಾರಾಟದ ಬಗ್ಗೆ ಕೆಎಂಎಫ್ ಅಧಿಕಾರಿಗಳು ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮೈಸೂರಿನ ಹೊಸಹುಂಡಿ ಗ್ರಾಮದಲ್ಲಿ ನಕಲಿ ತುಪ್ಪ ತಯಾ ರಿಕಾ ಘಟಕ ಪತ್ತೆಯಾಗಿತ್ತು. ಇಲ್ಲಿನ ತುಪ್ಪವನ್ನೇ, ನಂದಿನಿ ತುಪ್ಪ ವೆಂದು ಹೇಳಿ ಏಜೆನ್ಸಿಯವರು ಮಾರುತ್ತಿದ್ದರು. ರಾಜ್ಯ,ಹೊರ ರಾಜ್ಯಗಳಿಗೂ ನಕಲಿ ತುಪ್ಪ ಕಳುಹಿಸ ಲಾಗುತ್ತಿತ್ತು ಎನ್ನಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead"><strong>ವಿವಿಧೆಡೆ ದಾಳಿ: </strong>ನಕಲಿ ತುಪ್ಪ ತಯಾರಿಸುತ್ತಿದ್ದ ಮಾಹಿತಿ ಮೇರೆಗೆ ನಗರದ ಹಲವು ಕಡೆಗಳಲ್ಲಿಕೆಎಂಎಫ್ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದರು.</p>.<p class="Subhead">‘ತುಪ್ಪದ ಪೊಟ್ಟಣಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋ ಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ‘ನಂದಿನಿ’ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರುತ್ತಿದ್ದ ಆರೋಪ ದಡಿ ನಗರದ ‘ಶ್ರುತಿ ಮಾರ್ಕೆಟಿಂಗ್ ಕಾರ್ಪೋರೇಷನ್’ ಏಜೆನ್ಸಿ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ನಕಲಿ ತುಪ್ಪ ಮಾರಾಟದ ಬಗ್ಗೆ ಕೆಎಂಎಫ್ ಅಧಿಕಾರಿಗಳು ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮೈಸೂರಿನ ಹೊಸಹುಂಡಿ ಗ್ರಾಮದಲ್ಲಿ ನಕಲಿ ತುಪ್ಪ ತಯಾ ರಿಕಾ ಘಟಕ ಪತ್ತೆಯಾಗಿತ್ತು. ಇಲ್ಲಿನ ತುಪ್ಪವನ್ನೇ, ನಂದಿನಿ ತುಪ್ಪ ವೆಂದು ಹೇಳಿ ಏಜೆನ್ಸಿಯವರು ಮಾರುತ್ತಿದ್ದರು. ರಾಜ್ಯ,ಹೊರ ರಾಜ್ಯಗಳಿಗೂ ನಕಲಿ ತುಪ್ಪ ಕಳುಹಿಸ ಲಾಗುತ್ತಿತ್ತು ಎನ್ನಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead"><strong>ವಿವಿಧೆಡೆ ದಾಳಿ: </strong>ನಕಲಿ ತುಪ್ಪ ತಯಾರಿಸುತ್ತಿದ್ದ ಮಾಹಿತಿ ಮೇರೆಗೆ ನಗರದ ಹಲವು ಕಡೆಗಳಲ್ಲಿಕೆಎಂಎಫ್ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದರು.</p>.<p class="Subhead">‘ತುಪ್ಪದ ಪೊಟ್ಟಣಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋ ಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>