ಬೆಂಗಳೂರು: ನಗರದ ಹೂವಿನ ವ್ಯಾಪಾರಿಯೊಬ್ಬರಿಗೆ ನಕಲಿ ಚಿನ್ನವನ್ನು ಮಾರಾಟ ಮಾಡಿ ₹4 ಲಕ್ಷ ವಂಚಿಸಲಾಗಿದ್ದು, ಈ ಬಗ್ಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಜಿ.ಎಂ. ಪಾಳ್ಯದ ನಿವಾಸಿಯಾಗಿರುವ 43 ವರ್ಷದ ಹೂವಿನ ವ್ಯಾಪಾರಿ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.