‘ಆರೋಪಿಯು ನೀಡಿದ್ದ ಜಾಹೀರಾತು ಗಮನಿಸಿ ಅನುಮಾನಗೊಂಡಿದ್ದ ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದ ತಂಡ, ರಾಜಾಜಿನಗರದ ಕಚೇರಿ ಮೇಲೆ ದಾಳಿ ಮಾಡಿತ್ತು. ಆ ಕಂಪನಿಯು ನಕಲಿ ಎಂಬುದು ಗೊತ್ತಾಗಿತ್ತು. ಕೆಲ ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡದಿಂದ ಮೂರು ಲಕ್ಷ ಪಡೆದಿರುವ ಮಾಹಿತಿ ಇದೆ. ಆರೋಪಿ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ತಿಳಿಸಿದರು.