<p><strong>ಬೆಂಗಳೂರು</strong>: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ನಕಲಿ ನಿರ್ಮಾಪಕರೊಬ್ಬರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಅನ್ನಪೂರ್ಣೇಶ್ವರಿನಗರ ನಿವಾಸಿ ಹೇಮಂತ್ ಕುಮಾರ್ (34) ಬಂಧಿತ ಆರೋಪಿ.</p>.<p>ಕಿರುತೆರೆ ನಟಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಕಿರುತೆರೆಯಲ್ಲಿ ನಟಿಸುತ್ತಿರುವ ನಟಿಗೆ 2022ರಲ್ಲಿ ನಿರ್ದೇಶಕ, ನಿರ್ಮಾಪಕ ಎಂದು ಹೇಳಿಕೊಂಡು ಆರೋಪಿ ಪರಿಚಯವಾಗಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಿಚ್ಚಿ ಹೆಸರಿನ ಸಿನಿಮಾ ಮಾಡುತ್ತಿದ್ದು, ಅದರಲ್ಲಿ ನೀವು ನಾಯಕಿಯಾಗಿ ನಟಿಸಬೇಕು ಎಂದು ಹೇಮಂತ್ ಅವರು ನಟಿಯನ್ನು ಕೋರಿದ್ದರು. ಅದಕ್ಕೆ ನಟಿ ಒಪ್ಪಿದ್ದರು. ₹2 ಲಕ್ಷ ಸಂಭಾವನೆ ನೀಡುವುದಾಗಿ ಮಾತುಕತೆ ನಡೆದಿತ್ತು. ಮುಂಗಡವಾಗಿ ನಟಿಗೆ ₹60 ಸಾವಿರ ಕೊಡಲಾಗಿತ್ತು. ಅದರಂತೆ ಚಿತ್ರೀಕರಣ ಆರಂಭವಾಗಿತ್ತು. ಆದರೆ, ಕಾರಣಾಂತರಗಳಿಂದ ಆರೋಪಿ ಸಿನಿಮಾ ಚಿತ್ರೀಕರಣವನ್ನು ಮುಂದೂಡಿದ್ದರು. ಚಿತ್ರೀಕರಣದ ಅವಧಿಯಲ್ಲಿ ಆರೋಪಿ ಅಸಭ್ಯ ರೀತಿಯಲ್ಲಿ ಸ್ಪರ್ಶಿಸುತ್ತಿದ್ದರು’ ಎಂದು ದೂರು ನೀಡಲಾಗಿದೆ. </p>.<p>‘ಬೇರೆ ಕಡೆ ಸಿನಿಮಾ ಪ್ರಚಾರಕ್ಕೆ ಒಬ್ಬಳೇ ಬರುವಂತೆ ಹೇಳುತ್ತಿದ್ದರು. ಅದಕ್ಕೆ ನಿರಾಕರಿಸಿದಾಗ, ನನ್ನ ಹಿಂದೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿದ್ದಾರೆ’ ಎಂದು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ನಕಲಿ ನಿರ್ಮಾಪಕರೊಬ್ಬರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಅನ್ನಪೂರ್ಣೇಶ್ವರಿನಗರ ನಿವಾಸಿ ಹೇಮಂತ್ ಕುಮಾರ್ (34) ಬಂಧಿತ ಆರೋಪಿ.</p>.<p>ಕಿರುತೆರೆ ನಟಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಕಿರುತೆರೆಯಲ್ಲಿ ನಟಿಸುತ್ತಿರುವ ನಟಿಗೆ 2022ರಲ್ಲಿ ನಿರ್ದೇಶಕ, ನಿರ್ಮಾಪಕ ಎಂದು ಹೇಳಿಕೊಂಡು ಆರೋಪಿ ಪರಿಚಯವಾಗಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಿಚ್ಚಿ ಹೆಸರಿನ ಸಿನಿಮಾ ಮಾಡುತ್ತಿದ್ದು, ಅದರಲ್ಲಿ ನೀವು ನಾಯಕಿಯಾಗಿ ನಟಿಸಬೇಕು ಎಂದು ಹೇಮಂತ್ ಅವರು ನಟಿಯನ್ನು ಕೋರಿದ್ದರು. ಅದಕ್ಕೆ ನಟಿ ಒಪ್ಪಿದ್ದರು. ₹2 ಲಕ್ಷ ಸಂಭಾವನೆ ನೀಡುವುದಾಗಿ ಮಾತುಕತೆ ನಡೆದಿತ್ತು. ಮುಂಗಡವಾಗಿ ನಟಿಗೆ ₹60 ಸಾವಿರ ಕೊಡಲಾಗಿತ್ತು. ಅದರಂತೆ ಚಿತ್ರೀಕರಣ ಆರಂಭವಾಗಿತ್ತು. ಆದರೆ, ಕಾರಣಾಂತರಗಳಿಂದ ಆರೋಪಿ ಸಿನಿಮಾ ಚಿತ್ರೀಕರಣವನ್ನು ಮುಂದೂಡಿದ್ದರು. ಚಿತ್ರೀಕರಣದ ಅವಧಿಯಲ್ಲಿ ಆರೋಪಿ ಅಸಭ್ಯ ರೀತಿಯಲ್ಲಿ ಸ್ಪರ್ಶಿಸುತ್ತಿದ್ದರು’ ಎಂದು ದೂರು ನೀಡಲಾಗಿದೆ. </p>.<p>‘ಬೇರೆ ಕಡೆ ಸಿನಿಮಾ ಪ್ರಚಾರಕ್ಕೆ ಒಬ್ಬಳೇ ಬರುವಂತೆ ಹೇಳುತ್ತಿದ್ದರು. ಅದಕ್ಕೆ ನಿರಾಕರಿಸಿದಾಗ, ನನ್ನ ಹಿಂದೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿದ್ದಾರೆ’ ಎಂದು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>