<p><strong>ಬೆಂಗಳೂರು</strong>: ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೋಂದಣಿ ಮಾಡಿಸಿ ನೂರಾರು ಗ್ರಾಹಕರಿಗೆ ವಂಚಿಸಿದ ಆರೋಪದಡಿ ಬಿಟಿಎಂ ಲೇಔಟ್ನ ಹಿಂದಿನ ಉಪ ನೋಂದಣಾಧಿಕಾರಿ ಸೇರಿ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.</p>.<p>ಬಿಟಿಎಂ ಲೇಔಟ್ನ ಹಿಂದಿನ ಉಪ ನೋಂದಣಾಧಿಕಾರಿ ರೂಪಾ(40) ಮತ್ತು ಚಂದಾಪುರ ನಿವಾಸಿ, ನವಯುಗ ಪ್ರಾಪರ್ಟಿಸ್ ಪಾಲುದಾರ ನವೀನ್ ಕುಮಾರ್(36) ಎಂಬುವರನ್ನು ಬಂಧಿಸಲಾಗಿದೆ.</p>.<p>ಆರೋಪಿಗಳು, ಇತರೆ 38 ಮಂದಿ ಜತೆ ಸೇರಿಕೊಂಡು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿ ಬೆರೆಟೇನ ಅಗ್ರಹಾರ ಗ್ರಾಮದ ಸರ್ವೆ ನಂಬರ್ 5/2ರಲ್ಲಿರುವ 40ಕ್ಕೂ ಹೆಚ್ಚು ನಿವೇಶನಗಳನ್ನು ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದರು. ಈ ಪೈಕಿ ಎರಡು ನಿವೇಶನಗಳ ಮಾಲೀಕರು ಇಲ್ಲದಿದ್ದರೂ ನಕಲಿ ನೋಂದಣಿ ಆಗಿತ್ತು. ಈ ಸಂಬಂಧ 2022ರಲ್ಲಿ ದಾಖಲಾದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.</p>.<p>ಆರೋಪಿಗಳಾದ ನವೀನ್, ವೆಂಕಟೇಶ್ ನಾಯ್ಡು ಮತ್ತು ಇತರರು ನವಯುಗ ಪ್ರಾಪರ್ಟಿಸ್ ಎಂಬ ಸಂಸ್ಥೆ ತೆರೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾರೆ. ಈ ಮಧ್ಯೆ ದೂರುದಾರ ಮುಕುಂದ ಎಂಬುವರಿಗೆ ಸೇರಿದ್ದ ಜಮೀನಿಗೆ ಸಂಬಂಧಿಸಿದಂತೆ ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಯ ಪತ್ರ ಮಾಡಿದ್ದರು. ಮುಕುಂದ ಅವರ ತಂದೆ ನಾಗರಾಜ್ ಶೆಟ್ಟಿ ಹೆಸರಿನಲ್ಲಿದ್ದ ಈ ಜಮೀನನ್ನು, ಗಣೇಶ್ ಎಂಬಾತ ತಾನೇ ನಾಗರಾಜ್ ಶೆಟ್ಟಿ ಪುತ್ರ ಎಂದು ಬಿಂಬಿಸಿ ಅಕ್ರಮವಾಗಿ ಕ್ರಯ ಪತ್ರ ಮಾಡಿಸಿದ್ದ. ಆದರೆ, ಅಸಲಿಗೆ ನಾಗರಾಜ್ ಶೆಟ್ಟಿ ಅವರಿಗೆ ಗಣೇಶ್ ಎಂಬ ಮಗ ಇರಲಿಲ್ಲ ಎಂಬುದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.</p>.<p>ತನ್ನ ಹೆಸರಿಗೆ ಕ್ರಯಪತ್ರ ಮಾಡಿಸಿಕೊಂಡಿದ್ದ ಜಮೀನನ್ನು ಗಣೇಶ್, ಬೇರೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ್ದರು. ಆ ವ್ಯಕ್ತಿ ಜಮೀನಿನ ಸುತ್ತ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದರು. ಈ ವಿಚಾರ ತಿಳಿದ ಮುಕುಂದ, ಸ್ಥಳಕ್ಕೆ ತೆರಳಿ ಆ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ, ಗಣೇಶ್ ಎಂಬುವರಿಂದ ಜಮೀನು ಖರೀದಿಸಿದ್ದಾಗಿ ಹೇಳಿದ್ದಾರೆ. ಮೋಸ ಹೋಗಿರುವುದನ್ನು ಅರಿತ ಮುಕುಂದ, 2022ರಲ್ಲಿ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ 40 ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸುಮಾರು ಎರಡು ವರ್ಷಗಳ ನಂತರ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿದ್ದು, ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೋಂದಣಿ ಮಾಡಿಸಿ ನೂರಾರು ಗ್ರಾಹಕರಿಗೆ ವಂಚಿಸಿದ ಆರೋಪದಡಿ ಬಿಟಿಎಂ ಲೇಔಟ್ನ ಹಿಂದಿನ ಉಪ ನೋಂದಣಾಧಿಕಾರಿ ಸೇರಿ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.</p>.<p>ಬಿಟಿಎಂ ಲೇಔಟ್ನ ಹಿಂದಿನ ಉಪ ನೋಂದಣಾಧಿಕಾರಿ ರೂಪಾ(40) ಮತ್ತು ಚಂದಾಪುರ ನಿವಾಸಿ, ನವಯುಗ ಪ್ರಾಪರ್ಟಿಸ್ ಪಾಲುದಾರ ನವೀನ್ ಕುಮಾರ್(36) ಎಂಬುವರನ್ನು ಬಂಧಿಸಲಾಗಿದೆ.</p>.<p>ಆರೋಪಿಗಳು, ಇತರೆ 38 ಮಂದಿ ಜತೆ ಸೇರಿಕೊಂಡು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿ ಬೆರೆಟೇನ ಅಗ್ರಹಾರ ಗ್ರಾಮದ ಸರ್ವೆ ನಂಬರ್ 5/2ರಲ್ಲಿರುವ 40ಕ್ಕೂ ಹೆಚ್ಚು ನಿವೇಶನಗಳನ್ನು ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದರು. ಈ ಪೈಕಿ ಎರಡು ನಿವೇಶನಗಳ ಮಾಲೀಕರು ಇಲ್ಲದಿದ್ದರೂ ನಕಲಿ ನೋಂದಣಿ ಆಗಿತ್ತು. ಈ ಸಂಬಂಧ 2022ರಲ್ಲಿ ದಾಖಲಾದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.</p>.<p>ಆರೋಪಿಗಳಾದ ನವೀನ್, ವೆಂಕಟೇಶ್ ನಾಯ್ಡು ಮತ್ತು ಇತರರು ನವಯುಗ ಪ್ರಾಪರ್ಟಿಸ್ ಎಂಬ ಸಂಸ್ಥೆ ತೆರೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾರೆ. ಈ ಮಧ್ಯೆ ದೂರುದಾರ ಮುಕುಂದ ಎಂಬುವರಿಗೆ ಸೇರಿದ್ದ ಜಮೀನಿಗೆ ಸಂಬಂಧಿಸಿದಂತೆ ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಯ ಪತ್ರ ಮಾಡಿದ್ದರು. ಮುಕುಂದ ಅವರ ತಂದೆ ನಾಗರಾಜ್ ಶೆಟ್ಟಿ ಹೆಸರಿನಲ್ಲಿದ್ದ ಈ ಜಮೀನನ್ನು, ಗಣೇಶ್ ಎಂಬಾತ ತಾನೇ ನಾಗರಾಜ್ ಶೆಟ್ಟಿ ಪುತ್ರ ಎಂದು ಬಿಂಬಿಸಿ ಅಕ್ರಮವಾಗಿ ಕ್ರಯ ಪತ್ರ ಮಾಡಿಸಿದ್ದ. ಆದರೆ, ಅಸಲಿಗೆ ನಾಗರಾಜ್ ಶೆಟ್ಟಿ ಅವರಿಗೆ ಗಣೇಶ್ ಎಂಬ ಮಗ ಇರಲಿಲ್ಲ ಎಂಬುದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.</p>.<p>ತನ್ನ ಹೆಸರಿಗೆ ಕ್ರಯಪತ್ರ ಮಾಡಿಸಿಕೊಂಡಿದ್ದ ಜಮೀನನ್ನು ಗಣೇಶ್, ಬೇರೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ್ದರು. ಆ ವ್ಯಕ್ತಿ ಜಮೀನಿನ ಸುತ್ತ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದರು. ಈ ವಿಚಾರ ತಿಳಿದ ಮುಕುಂದ, ಸ್ಥಳಕ್ಕೆ ತೆರಳಿ ಆ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ, ಗಣೇಶ್ ಎಂಬುವರಿಂದ ಜಮೀನು ಖರೀದಿಸಿದ್ದಾಗಿ ಹೇಳಿದ್ದಾರೆ. ಮೋಸ ಹೋಗಿರುವುದನ್ನು ಅರಿತ ಮುಕುಂದ, 2022ರಲ್ಲಿ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ 40 ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸುಮಾರು ಎರಡು ವರ್ಷಗಳ ನಂತರ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿದ್ದು, ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>