<p><strong>ಬೆಂಗಳೂರು</strong>: ಜರ್ಮನಿಯ ಫಾಲಿಂಗ್ ವಾಲ್ಸ್ ಪ್ರತಿಷ್ಠಾನ ಪ್ರಕಟಿಸುವ ಪ್ರಮುಖ ವೈಜ್ಞಾನಿಕ ಬೆಳವಣಿಗೆಗಳ ಪಟ್ಟಿಯಲ್ಲಿ ಕನ್ನಡಿಗರಾದ ಕೊಳ್ಳೇಗಾಲ ಶರ್ಮಾ ಮತ್ತು ಟಿ.ಜಿ. ಶ್ರೀನಿಧಿ ಸ್ಥಾನ ಪಡೆದಿದ್ದಾರೆ. ವಿಜ್ಞಾನ ಸಂವಹನ ಪಟ್ಟಿಯ ಅಂತಿಮ ಸುತ್ತಿಗೆ ಇಬ್ಬರೂ ಆಯ್ಕೆಯಾಗಿದ್ದು, ಪ್ರತಿಷ್ಠಾನದ ವಾರ್ಷಿಕ ಸಮ್ಮೇಳನದಲ್ಲಿ ವಿಜೇತರ ಹೆಸರನ್ನು ಘೋಷಿಸಲಾಗುತ್ತದೆ.</p>.<p>ಜರ್ಮನಿಯ ಬರ್ಲಿನ್ ಗೋಡೆಯನ್ನು ಕೆಡವಲಾಗಿದ್ದರ ನೆನಪಿನಲ್ಲಿ ನಡೆಯುವ ಈ ಸಮ್ಮೇಳನವು ವಿಜ್ಞಾನ ಪ್ರಸಾರಕ್ಕಿರುವ ಅಡ್ಡಗೋಡೆಗಳನ್ನು ನಿವಾರಿಸುವ ಉದ್ದೇಶ ಹೊಂದಿದೆ. ಈ ಸಮ್ಮೇಳನದ ಅಂಗವಾಗಿ ವರ್ಷದ ಪ್ರಮುಖ ವೈಜ್ಞಾನಿಕ ಬೆಳವಣಿಗೆಗಳ ಪಟ್ಟಿ ಪ್ರಕಟಿಸಲಾಗಿದೆ.</p>.<p>ಹತ್ತು ವಿಭಾಗಗಳಲ್ಲಿ ನೂರಾರು ಸ್ಪರ್ಧಿಗಳು ಅಂತಿಮ ಸುತ್ತಿನಲ್ಲಿದ್ದಾರೆ. ಒಂದೊಂದು ವಿಭಾಗದಲ್ಲಿ ಒಬ್ಬೊಬ್ಬರಂತೆ 10 ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.</p>.<p>ಕೊಳ್ಳೇಗಾಲ ಶರ್ಮಾ ಹಿರಿಯ ವಿಜ್ಞಾನ ಸಂವಹನಕಾರರು. ನಾಲ್ಕು ವರ್ಷಗಳಿಂದ ವಿಜ್ಞಾನದ ವಿಷಯಗಳನ್ನು ಧ್ವನಿರೂಪದಲ್ಲಿ ತಲುಪಿಸುತ್ತಿರುವ 'ಜಾಣಸುದ್ದಿ' ಸಂಚಿಕೆಗಳು ಪಾಡ್ಕಾಸ್ಟ್ನಲ್ಲಿ ಪ್ರಸಾರವಾಗುತ್ತಿವೆ. ಈ ಸರಣಿಗಾಗಿಯೇ ಶರ್ಮಾ ಅವರಿಗೆ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.</p>.<p>ಇ–ಜ್ಞಾನ ಜಾಲತಾಣದ ಮೂಲಕ ವಿಜ್ಞಾನ–ತಂತ್ರಜ್ಞಾನದ ವಿಷಯಗಳನ್ನು ಕನ್ನಡದ ಓದುಗರಿಗೆ ತಲುಪಿಸುವ ಕೆಲಸದಲ್ಲಿ ತೊಡಗಿರುವ ಟಿ.ಜಿ. ಶ್ರೀನಿಧಿ ಅವರ ‘ಕೊರೊನಾಲಜಿ’ ಸರಣಿ ಬರಹವನ್ನು ಪರಿಗಣಿಸಿ, ಈ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.</p>.<p>‘ಪ್ರತಿವರ್ಷ ಜರ್ಮನಿಯಲ್ಲಿಯೇ ಕಾರ್ಯಕ್ರಮ ನಡೆಯುತ್ತಿತ್ತು. ಕೋವಿಡ್ ಇರುವುದರಿಂದ ನ.8ರಂದು ವರ್ಚುವಲ್ ರೂಪದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದು ಶ್ರೀನಿಧಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜರ್ಮನಿಯ ಫಾಲಿಂಗ್ ವಾಲ್ಸ್ ಪ್ರತಿಷ್ಠಾನ ಪ್ರಕಟಿಸುವ ಪ್ರಮುಖ ವೈಜ್ಞಾನಿಕ ಬೆಳವಣಿಗೆಗಳ ಪಟ್ಟಿಯಲ್ಲಿ ಕನ್ನಡಿಗರಾದ ಕೊಳ್ಳೇಗಾಲ ಶರ್ಮಾ ಮತ್ತು ಟಿ.ಜಿ. ಶ್ರೀನಿಧಿ ಸ್ಥಾನ ಪಡೆದಿದ್ದಾರೆ. ವಿಜ್ಞಾನ ಸಂವಹನ ಪಟ್ಟಿಯ ಅಂತಿಮ ಸುತ್ತಿಗೆ ಇಬ್ಬರೂ ಆಯ್ಕೆಯಾಗಿದ್ದು, ಪ್ರತಿಷ್ಠಾನದ ವಾರ್ಷಿಕ ಸಮ್ಮೇಳನದಲ್ಲಿ ವಿಜೇತರ ಹೆಸರನ್ನು ಘೋಷಿಸಲಾಗುತ್ತದೆ.</p>.<p>ಜರ್ಮನಿಯ ಬರ್ಲಿನ್ ಗೋಡೆಯನ್ನು ಕೆಡವಲಾಗಿದ್ದರ ನೆನಪಿನಲ್ಲಿ ನಡೆಯುವ ಈ ಸಮ್ಮೇಳನವು ವಿಜ್ಞಾನ ಪ್ರಸಾರಕ್ಕಿರುವ ಅಡ್ಡಗೋಡೆಗಳನ್ನು ನಿವಾರಿಸುವ ಉದ್ದೇಶ ಹೊಂದಿದೆ. ಈ ಸಮ್ಮೇಳನದ ಅಂಗವಾಗಿ ವರ್ಷದ ಪ್ರಮುಖ ವೈಜ್ಞಾನಿಕ ಬೆಳವಣಿಗೆಗಳ ಪಟ್ಟಿ ಪ್ರಕಟಿಸಲಾಗಿದೆ.</p>.<p>ಹತ್ತು ವಿಭಾಗಗಳಲ್ಲಿ ನೂರಾರು ಸ್ಪರ್ಧಿಗಳು ಅಂತಿಮ ಸುತ್ತಿನಲ್ಲಿದ್ದಾರೆ. ಒಂದೊಂದು ವಿಭಾಗದಲ್ಲಿ ಒಬ್ಬೊಬ್ಬರಂತೆ 10 ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.</p>.<p>ಕೊಳ್ಳೇಗಾಲ ಶರ್ಮಾ ಹಿರಿಯ ವಿಜ್ಞಾನ ಸಂವಹನಕಾರರು. ನಾಲ್ಕು ವರ್ಷಗಳಿಂದ ವಿಜ್ಞಾನದ ವಿಷಯಗಳನ್ನು ಧ್ವನಿರೂಪದಲ್ಲಿ ತಲುಪಿಸುತ್ತಿರುವ 'ಜಾಣಸುದ್ದಿ' ಸಂಚಿಕೆಗಳು ಪಾಡ್ಕಾಸ್ಟ್ನಲ್ಲಿ ಪ್ರಸಾರವಾಗುತ್ತಿವೆ. ಈ ಸರಣಿಗಾಗಿಯೇ ಶರ್ಮಾ ಅವರಿಗೆ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.</p>.<p>ಇ–ಜ್ಞಾನ ಜಾಲತಾಣದ ಮೂಲಕ ವಿಜ್ಞಾನ–ತಂತ್ರಜ್ಞಾನದ ವಿಷಯಗಳನ್ನು ಕನ್ನಡದ ಓದುಗರಿಗೆ ತಲುಪಿಸುವ ಕೆಲಸದಲ್ಲಿ ತೊಡಗಿರುವ ಟಿ.ಜಿ. ಶ್ರೀನಿಧಿ ಅವರ ‘ಕೊರೊನಾಲಜಿ’ ಸರಣಿ ಬರಹವನ್ನು ಪರಿಗಣಿಸಿ, ಈ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.</p>.<p>‘ಪ್ರತಿವರ್ಷ ಜರ್ಮನಿಯಲ್ಲಿಯೇ ಕಾರ್ಯಕ್ರಮ ನಡೆಯುತ್ತಿತ್ತು. ಕೋವಿಡ್ ಇರುವುದರಿಂದ ನ.8ರಂದು ವರ್ಚುವಲ್ ರೂಪದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದು ಶ್ರೀನಿಧಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>