<p><strong>ಬೆಂಗಳೂರು:</strong> ಉಗ್ರರು ನುಸುಳಿದ್ದಾರೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ಆರೋಪದಡಿ ಮಾಜಿ ಸೈನಿಕ ಸುಂದರಮೂರ್ತಿ ಎಂಬುವರನ್ನು ಅವಲಹಳ್ಳಿ ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿವೆಂಕಟೇಶ್ವರ ಲೇಔಟ್ ಮನೆಯಲ್ಲಿ ಸುಂದರಮೂರ್ತಿ ಬಂಧಿಸಿದರು. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಬಂಧಿಸಿ ವಿಚಾರಣೆ ನಡೆಸಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/district/militants-tamilnadu-632291.html" target="_blank">ರಾಮನಾಥಪುರದಲ್ಲಿ 19 ಉಗ್ರರಿದ್ದಾರೆ ಎಂದುಡಿಜಿಪಿ ಬರೆದ ಪತ್ರ ವೈರಲ್</a></strong></p>.<p>'ನನ್ನ ಮನಸ್ಸಿಗೆ ಹಾಗೇ ಬಂತು ಕರೆ ಮಾಡಿದೆ. ಈಗ ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟ ಆಗಿತ್ತು. ಹೀಗಾಗಿ ಅದೇ ರೀತಿ ಆಗಬಹುದು ಎಂದು ಊಹಿಸಿ ಕರೆ ಮಾಡಿದೆ' ಎಂದ ಆರೋಪಿ ಹೇಳಿದ್ದಾನೆ.</p>.<p>ಕೋಲಾರ ಎಸ್ಪಿ ಹಾಗೂ ಬೆಂಗಳೂರು ಗ್ರಾಮಾಂತರ ಪೊಲೀಸರಿಂದ ರಾತ್ರಿ ತೀವ್ರ ಹುಡುಕಾಟ ನಡೆದಿತ್ತು. ಮೊಬೈಲ್ ಕರೆ ಲೊಕೇಶನ್ ಆಧರಿಸಿ ಅವರನ್ನು ಬಂಧಿಸಲಾಗಿದೆ.</p>.<p>ಸೈನ್ಯದಲ್ಲಿ 20 ವರ್ಷ ಸೇವೆ ಸಲ್ಲಿಸಿದ್ದ ಆರೋಪಿ, ನಿವೃತ್ತಿ ಬಳಿಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಸುಂದರಮೂರ್ತಿ ಅವರ ಇಬ್ಬರು ಮಕ್ಕಳು ಸೈನಿಕರಾಗಿದ್ದಾರೆ.ಒಬ್ಬ ಮಗ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮನಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಗ್ರರು ನುಸುಳಿದ್ದಾರೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ಆರೋಪದಡಿ ಮಾಜಿ ಸೈನಿಕ ಸುಂದರಮೂರ್ತಿ ಎಂಬುವರನ್ನು ಅವಲಹಳ್ಳಿ ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿವೆಂಕಟೇಶ್ವರ ಲೇಔಟ್ ಮನೆಯಲ್ಲಿ ಸುಂದರಮೂರ್ತಿ ಬಂಧಿಸಿದರು. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಬಂಧಿಸಿ ವಿಚಾರಣೆ ನಡೆಸಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/district/militants-tamilnadu-632291.html" target="_blank">ರಾಮನಾಥಪುರದಲ್ಲಿ 19 ಉಗ್ರರಿದ್ದಾರೆ ಎಂದುಡಿಜಿಪಿ ಬರೆದ ಪತ್ರ ವೈರಲ್</a></strong></p>.<p>'ನನ್ನ ಮನಸ್ಸಿಗೆ ಹಾಗೇ ಬಂತು ಕರೆ ಮಾಡಿದೆ. ಈಗ ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟ ಆಗಿತ್ತು. ಹೀಗಾಗಿ ಅದೇ ರೀತಿ ಆಗಬಹುದು ಎಂದು ಊಹಿಸಿ ಕರೆ ಮಾಡಿದೆ' ಎಂದ ಆರೋಪಿ ಹೇಳಿದ್ದಾನೆ.</p>.<p>ಕೋಲಾರ ಎಸ್ಪಿ ಹಾಗೂ ಬೆಂಗಳೂರು ಗ್ರಾಮಾಂತರ ಪೊಲೀಸರಿಂದ ರಾತ್ರಿ ತೀವ್ರ ಹುಡುಕಾಟ ನಡೆದಿತ್ತು. ಮೊಬೈಲ್ ಕರೆ ಲೊಕೇಶನ್ ಆಧರಿಸಿ ಅವರನ್ನು ಬಂಧಿಸಲಾಗಿದೆ.</p>.<p>ಸೈನ್ಯದಲ್ಲಿ 20 ವರ್ಷ ಸೇವೆ ಸಲ್ಲಿಸಿದ್ದ ಆರೋಪಿ, ನಿವೃತ್ತಿ ಬಳಿಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಸುಂದರಮೂರ್ತಿ ಅವರ ಇಬ್ಬರು ಮಕ್ಕಳು ಸೈನಿಕರಾಗಿದ್ದಾರೆ.ಒಬ್ಬ ಮಗ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮನಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>