‘ಇಪ್ಪತ್ತು ಕುಂಟೆ ಭೂಮಿಯಲ್ಲಿ ಕೃಷಿ ಮಾಡುವ ಸಣ್ಣ ರೈತರಿಗೆ ಬಿತ್ತನೆ ಬೀಜ ನೀಡುವುದಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕಂಪ್ಯೂಟರ್ ದಾಖಲೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳುತ್ತಾರೆ. ಹಾಗಾದರೆ ಸಣ್ಣ ರೈತ ಎಲ್ಲಿಗೆ ಹೋಗಬೇಕು’ ಎಂದು ಪ್ರಶ್ನಿಸಿದ ಅವರು, ‘ಈ ಕೂಡಲೇ ಸಣ್ಣ ಹಿಡುವಳಿದಾರರಿಗೂ ಬಿತ್ತನೆ ಬೀಜವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.