‘ಗಾಂಧಿಭವನ ಸಭಾಭವನದಲ್ಲಿ ಮೇ 30 ರಂದು ಆಯೋಜಿಸಿದ್ದ ರೈತ ಮುಖಂಡರ ಪತ್ರಿಕಾಗೋಷ್ಠಿಯಲ್ಲಿ ರಾಕೇಶ್ ಮೇಲೆ ಹಲ್ಲೆ ಮಾಡಿ, ಕಪ್ಪು ಮಸಿ ಎರಚಿ ‘ಮೋದಿ... ಮೋದಿ...’ ಘೋಷಣೆ ಕೂಗಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ‘ಭಾರತ ರಕ್ಷಣಾ ವೇದಿಕೆ’ ರಾಜ್ಯ ಘಟಕದ ಅಧ್ಯಕ್ಷ ಭರತ್ ಶೆಟ್ಟಿ, ಶಿವಕುಮಾರ್ ಹಾಗೂ ಪ್ರದೀಪ್ ಎಂಬುವರನ್ನು ಬಂಧಿಸಲಾಗಿತ್ತು’ ಎಂದೂ ತಿಳಿಸಿದರು.