<p><strong>ಬೆಂಗಳೂರು</strong>: ‘ರೈತರು ಸಾವಯವ, ಸಮಗ್ರ ಹಾಗೂ ಸುಸ್ಥಿರ ಕೃಷಿಗೆ ಆದ್ಯತೆ ನೀಡಬೇಕು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. </p>.<p>ಸಮನ್ವಯ ಟ್ರಸ್ಟ್, ಫುಡ್ ಚೈನ್, ಕೃಷಿ ತಂತ್ರಜ್ಞರ ಸಂಸ್ಥೆ (ಐಎಟಿ) ಹಾಗೂ ದಕ್ಷಿಣ ಕನ್ನಡದ ಐಸಿಎಆರ್–ಕೆವಿಕೆಯ ಸಹಯೋಗದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಲು ಸರ್ಕಾರ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ನೆರವಾಗಲಿವೆ. ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಕೃಷಿ ಕ್ಷೇತ್ರದಲ್ಲಿ ನೂತನ ಸಂಶೋಧನೆಗೆ ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು. </p>.<p>ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಮಾತನಾಡಿ, ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ (ಪಿಎಂಎಫ್ಎಂಇ) ಅಡಿಯಲ್ಲಿ ಕಿರು ಆಹಾರ ಉದ್ದಿಮೆಗಳನ್ನು ಸ್ಥಾಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ₹15 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಕಿರು ಆಹಾರ ಘಟಕಗಳನ್ನು ಸ್ಥಾಪಿಸಿದ ನಂತರ ರೈತರಿಂದ ಕಚ್ಚಾ ಉತ್ಪನ್ನಗಳನ್ನು ಖರೀದಿಸಿ, ಅದಕ್ಕೆ ಮೌಲ್ಯವರ್ಧನೆ ಮಾಡಿ ಹೆಚ್ಚು ಆದಾಯ ಗಳಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೆಪೆಕ್ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು’ ಎಂದು ಸಲಹೆ ನೀಡಿದರು. </p>.<p>ಪ್ರಗತಿಪರ ರೈತ ಎಂ.ಸಿ. ರಂಗಸ್ವಾಮಿ ಮಾತನಾಡಿ, ‘ರಾಜ್ಯ ಸರ್ಕಾರ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶೀತಲ ಗೃಹ ಸ್ಥಾಪಿಸಬೇಕು. ರೈತರು ಬೆಳೆದ ಹಣ್ಣು–ತರಕಾರಿಗಳನ್ನು ಇದರಲ್ಲಿ ಸಂಗ್ರಹ ಮಾಡಿ, ಉತ್ತಮ ಬೆಲೆಗೆ ಮಾರಾಟ ಮಾಡಲು ಸಹಾಯಕವಾಗುತ್ತದೆ’ ಎಂದರು. </p>.<p>ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ್ ನಾಯಕ್ ಅವರಿಗೆ ಇದೇ ಸಂದರ್ಭದಲ್ಲಿ ಗ್ರಾಮೀಣ ನಾಯಕತ್ವ ಹಾಗೂ ಕೃಷಿ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಎ.ಬಿ. ಪಾಟೀಲ, ಸಮನ್ವಯ ಟ್ರಸ್ಟ್ನ ಸುಮಲತಾ ಕೆ.ಎಚ್., ಎಫ್ಕೆಸಿಸಿಐನ ಉಪಾಧ್ಯಕ್ಷ ಟಿ. ಸಾಯಿರಾಮ ಪ್ರಸಾದ್, ಎಫ್ಕೆಸಿಸಿಐನ ಅಗ್ರಿಟೆಕ್ ಸಮಿತಿಯ ಅಧ್ಯಕ್ಷೆ ರೂಪಾರಾಣಿ, ತೋಟಗಾರಿಕೆ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಸ್.ವಿ. ಹಿತ್ತಲಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರೈತರು ಸಾವಯವ, ಸಮಗ್ರ ಹಾಗೂ ಸುಸ್ಥಿರ ಕೃಷಿಗೆ ಆದ್ಯತೆ ನೀಡಬೇಕು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. </p>.<p>ಸಮನ್ವಯ ಟ್ರಸ್ಟ್, ಫುಡ್ ಚೈನ್, ಕೃಷಿ ತಂತ್ರಜ್ಞರ ಸಂಸ್ಥೆ (ಐಎಟಿ) ಹಾಗೂ ದಕ್ಷಿಣ ಕನ್ನಡದ ಐಸಿಎಆರ್–ಕೆವಿಕೆಯ ಸಹಯೋಗದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಲು ಸರ್ಕಾರ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ನೆರವಾಗಲಿವೆ. ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಕೃಷಿ ಕ್ಷೇತ್ರದಲ್ಲಿ ನೂತನ ಸಂಶೋಧನೆಗೆ ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು. </p>.<p>ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಮಾತನಾಡಿ, ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ (ಪಿಎಂಎಫ್ಎಂಇ) ಅಡಿಯಲ್ಲಿ ಕಿರು ಆಹಾರ ಉದ್ದಿಮೆಗಳನ್ನು ಸ್ಥಾಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ₹15 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಕಿರು ಆಹಾರ ಘಟಕಗಳನ್ನು ಸ್ಥಾಪಿಸಿದ ನಂತರ ರೈತರಿಂದ ಕಚ್ಚಾ ಉತ್ಪನ್ನಗಳನ್ನು ಖರೀದಿಸಿ, ಅದಕ್ಕೆ ಮೌಲ್ಯವರ್ಧನೆ ಮಾಡಿ ಹೆಚ್ಚು ಆದಾಯ ಗಳಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೆಪೆಕ್ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು’ ಎಂದು ಸಲಹೆ ನೀಡಿದರು. </p>.<p>ಪ್ರಗತಿಪರ ರೈತ ಎಂ.ಸಿ. ರಂಗಸ್ವಾಮಿ ಮಾತನಾಡಿ, ‘ರಾಜ್ಯ ಸರ್ಕಾರ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶೀತಲ ಗೃಹ ಸ್ಥಾಪಿಸಬೇಕು. ರೈತರು ಬೆಳೆದ ಹಣ್ಣು–ತರಕಾರಿಗಳನ್ನು ಇದರಲ್ಲಿ ಸಂಗ್ರಹ ಮಾಡಿ, ಉತ್ತಮ ಬೆಲೆಗೆ ಮಾರಾಟ ಮಾಡಲು ಸಹಾಯಕವಾಗುತ್ತದೆ’ ಎಂದರು. </p>.<p>ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ್ ನಾಯಕ್ ಅವರಿಗೆ ಇದೇ ಸಂದರ್ಭದಲ್ಲಿ ಗ್ರಾಮೀಣ ನಾಯಕತ್ವ ಹಾಗೂ ಕೃಷಿ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಎ.ಬಿ. ಪಾಟೀಲ, ಸಮನ್ವಯ ಟ್ರಸ್ಟ್ನ ಸುಮಲತಾ ಕೆ.ಎಚ್., ಎಫ್ಕೆಸಿಸಿಐನ ಉಪಾಧ್ಯಕ್ಷ ಟಿ. ಸಾಯಿರಾಮ ಪ್ರಸಾದ್, ಎಫ್ಕೆಸಿಸಿಐನ ಅಗ್ರಿಟೆಕ್ ಸಮಿತಿಯ ಅಧ್ಯಕ್ಷೆ ರೂಪಾರಾಣಿ, ತೋಟಗಾರಿಕೆ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಸ್.ವಿ. ಹಿತ್ತಲಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>