‘15 ವರ್ಷಗಳಿಂದ ಪ್ರತಿ ವರ್ಷ ಸರ್ವೆ ಮಾಡುತ್ತಲೇ ಇದ್ದೀರಿ. ಆದರೆ, ರೈತರ ಭೂಮಿಗೆ ಇನ್ನೂ ಪರಿಹಾರ ಹಣ ಎಷ್ಟು ಎಂದು ನಿಗದಿ ಮಾಡಿಲ್ಲ. ಒಂದೊಂದು ಸಭೆಯಲ್ಲಿ ಒಂದೊಂದು ರೀತಿ ಮೊತ್ತವನ್ನು ನಿಗದಿ ಮಾಡಲಾಗುತ್ತಿದೆ. ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ರಘು ಆಕ್ರೋಶ ವ್ಯಕ್ತಪಡಿಸಿದರು.