ಯಲಹಂಕದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ, ‘ಮೈಲಪ್ಪನಹಳ್ಳಿಗ್ರಾಮದ ಸರ್ವೆ ನಂ 21ರಲ್ಲಿ 14 ಎಕರೆ ಸರ್ಕಾರಿ ಜಾಗವಿದೆ. ಇದರಲ್ಲಿ ಐದು ಎಕರೆ ಸರ್ಕಾರಿ ಜಾಗವನ್ನು ನಟರೊಬ್ಬರ ಪತ್ನಿ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ. ಮತ್ತೆ ಐದು ಎಕರೆ ಜಾಗವು ವಾಣಿ ವಿಶ್ವನಾಥ್ ಅವರ ಹೆಸರಿನಲ್ಲಿ ನೋಂದಣಿಯಾಗಿದೆ. ಸರ್ಕಾರಿ ಜಾಗವನ್ನು ನೋಂದಣಿ ಮಾಡಿಸಿದವರು ಯಾರು. ಈ ಬಗ್ಗೆ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಲಾಗುವುದು’ ಎಂದರು.