‘ದೆಹಲಿ ರೈತರ ಪ್ರತಿಭಟನೆ– ರೈತರ ಹೋರಾಟಕ್ಕೆ ಐತಿಹಾಸಿಕ ಜಯ: ಮುಂದೇನು?’ ಕುರಿತು ಗುರುವಾರ ಆಯೋಜಿಸಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಶಾಸನ ರೂಪಿಸಬೇಕು ಮತ್ತು ವಿದ್ಯುತ್ ಮಸೂದೆ ವಾಪಸ್ ಪಡೆಯಬೇಕು. ಜತೆಗೆ, ಹೋರಾಟದ ಸಂದರ್ಭದಲ್ಲಿ ಹುತಾತ್ಮರಾದ ಕುಟುಂಬದ ಸದಸ್ಯರಿಗೆ ಪರಿಹಾರ ಮತ್ತು ಪುನರ್ವಸತಿ ದೊರೆಯಬೇಕು. ಈ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟವನ್ನು ಮುಂದುವರಿಸಬೇಕಾಗಿದೆ’ ಎಂದು ಹೇಳಿದರು.