<p><strong>ಬೆಂಗಳೂರು</strong>: ಕನಕಪುರ ರಸ್ತೆಯ ಸೋಮನಹಳ್ಳಿ ಟೋಲ್ ಬಳಿ ಸರ್ವೀಸ್ ರಸ್ತೆ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಗ್ಗಲೀಪುರ ಶಾಖೆಯ ಸದಸ್ಯರು ಸೋಮನಹಳ್ಳಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರೈತ ಮುಖಂಡರಾದ ನದೀಮ್ ಪಾಷ, ಸಿ. ಪುಟ್ಟಸ್ವಾಮಿ ಸೇರಿದಂತೆ ಕಗ್ಗಲಿಪುರ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಲ ರೈತರು ಮೈಗೆ ಸಗಣಿ ಹಚ್ಚಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬಗರ್ ಹುಕುಂ ಸಾಗುವಳಿಯಲ್ಲಿ ರೈತರಿಗೆ ಮಂಜೂರಾದ ಕೃಷಿ ಜಮೀನನ್ನು ಸಕ್ರಮಗೊಳಿಸಿ ಪೋಡಿ, ದುರಸ್ತಿ ಮಾಡಿಕೊಡದೇ ರೈತರ ಹಕ್ಕನ್ನು ಕಸಿದುಕೊಳ್ಳುಲಾಗಿದೆ' ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>‘ಕಗ್ಗಲೀಪುರ, ಸಾಲುಹುಣಸೆ, ಉದಿಪಾಳ್ಯ ಗ್ರಾಮಗಳಿಗೆ ಬೈಪಾಸ್ ರಸ್ತೆಗಳಿಲ್ಲದೇ ಸ್ಥಳೀಯರು ಓಡಾಡುವುದಕ್ಕೆ ತೊಂದರೆಯಾಗುತ್ತಿದೆ. ಇದನ್ನು ತಕ್ಷಣವೇ ಸರಿಪಡಿಸಬೇಕು. ಸಾಗುವಳಿ ರೈತರ ಮೇಲೆ ಅರಣ್ಯ ಇಲಾಖೆ ಮಾಡುತ್ತಿರುವ ದೌರ್ಜನ್ಯದಿಂದ ಮುಕ್ತಿ ನೀಡಬೇಕು. ಪಟ್ಟರೆಡ್ಡಿ ಪಾಳ್ಯ ಗ್ರಾಮಕ್ಕೆ ಪರ್ಯಾಯ ರಸ್ತೆ ನಿರ್ಮಿಸಲು ಅನುದಾನ ಒದಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>‘ಸರ್ಕಾರ ಕೂಡಲೇ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು. ಸಾಕಮ್ಮ ಬಡಾವಣೆ ಅಧಿಕೃತಗೊಳಿಸಬೇಕು. ಬೋಳಾರೆ ಗ್ರಾಮದ ವಾಸಿಗಳಿಗೆ ಇ–ಸ್ವತ್ತು ನೀಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನಕಪುರ ರಸ್ತೆಯ ಸೋಮನಹಳ್ಳಿ ಟೋಲ್ ಬಳಿ ಸರ್ವೀಸ್ ರಸ್ತೆ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಗ್ಗಲೀಪುರ ಶಾಖೆಯ ಸದಸ್ಯರು ಸೋಮನಹಳ್ಳಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರೈತ ಮುಖಂಡರಾದ ನದೀಮ್ ಪಾಷ, ಸಿ. ಪುಟ್ಟಸ್ವಾಮಿ ಸೇರಿದಂತೆ ಕಗ್ಗಲಿಪುರ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಲ ರೈತರು ಮೈಗೆ ಸಗಣಿ ಹಚ್ಚಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬಗರ್ ಹುಕುಂ ಸಾಗುವಳಿಯಲ್ಲಿ ರೈತರಿಗೆ ಮಂಜೂರಾದ ಕೃಷಿ ಜಮೀನನ್ನು ಸಕ್ರಮಗೊಳಿಸಿ ಪೋಡಿ, ದುರಸ್ತಿ ಮಾಡಿಕೊಡದೇ ರೈತರ ಹಕ್ಕನ್ನು ಕಸಿದುಕೊಳ್ಳುಲಾಗಿದೆ' ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>‘ಕಗ್ಗಲೀಪುರ, ಸಾಲುಹುಣಸೆ, ಉದಿಪಾಳ್ಯ ಗ್ರಾಮಗಳಿಗೆ ಬೈಪಾಸ್ ರಸ್ತೆಗಳಿಲ್ಲದೇ ಸ್ಥಳೀಯರು ಓಡಾಡುವುದಕ್ಕೆ ತೊಂದರೆಯಾಗುತ್ತಿದೆ. ಇದನ್ನು ತಕ್ಷಣವೇ ಸರಿಪಡಿಸಬೇಕು. ಸಾಗುವಳಿ ರೈತರ ಮೇಲೆ ಅರಣ್ಯ ಇಲಾಖೆ ಮಾಡುತ್ತಿರುವ ದೌರ್ಜನ್ಯದಿಂದ ಮುಕ್ತಿ ನೀಡಬೇಕು. ಪಟ್ಟರೆಡ್ಡಿ ಪಾಳ್ಯ ಗ್ರಾಮಕ್ಕೆ ಪರ್ಯಾಯ ರಸ್ತೆ ನಿರ್ಮಿಸಲು ಅನುದಾನ ಒದಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>‘ಸರ್ಕಾರ ಕೂಡಲೇ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು. ಸಾಕಮ್ಮ ಬಡಾವಣೆ ಅಧಿಕೃತಗೊಳಿಸಬೇಕು. ಬೋಳಾರೆ ಗ್ರಾಮದ ವಾಸಿಗಳಿಗೆ ಇ–ಸ್ವತ್ತು ನೀಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>