<p><strong>ದಾಬಸ್ ಪೇಟೆ:</strong> ‘ಕೃಷಿಯಲ್ಲಿ ಮಣ್ಣು ಮತ್ತು ನೀರು ಅತ್ಯಮೂಲ್ಯ. ಈ ಎರಡೂ ಕಲುಷಿತವಾಗದಂತೆ ನಮ್ಮ ರೈತರು ನೋಡಿಕೊಳ್ಳಬೇಕು. ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆಯಡಿ ಸೌಲಭ್ಯ ಸಿಗಲಿದ್ದು, ರೈತರು ಅದನ್ನು ಬಳಸಿಕೊಳ್ಳಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಪಂಕಜಾ ಹೇಳಿದರು.</p>.<p>ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ‘ರೈತ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ಅಭಿವೃದ್ಧಿ ಹೆಸರಲ್ಲಿ ರೈತರ ಫಲವತ್ತಾದ ಕೃಷಿ ಜಮೀನು ಕಬಳಿಸುತ್ತಿದೆ. ರೈತರ ಜಮೀನಿಗೆ ಉತ್ತಮ ಬೆಲೆಯೂ ಸಿಗುತ್ತಿಲ್ಲ. ಜಮೀನು ಕಳೆದುಕೊಳ್ಳುವ ರೈತರ ಹಿತ ಕಾಯುವ ಕೆಲಸವನ್ನು ಸರ್ಕಾರ ಮಾಡಬೇಕು’ ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಆರ್.ಚನ್ನೇಗೌಡ ಒತ್ತಾಯಿಸಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹನುಮಂತರಾಯ ಮಾತನಾಡಿ, ‘ರೈತರು ಸಮಗ್ರ ಕೃಷಿಯನ್ನು ಅಳವಡಿಸಿಕೊಂಡಾಗ ಆರ್ಥಿಕವಾಗಿ ಸದೃಢರಾಗಲು ಸಾಧ್ಯ’ ಎಂದರು.</p>.<p>ಕೃಷಿ, ಮೀನುಗಾರಿಕೆ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಮಳಿಗೆ ತೆರೆದು, ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಿದರು. ಉತ್ತಮ ರೈತರನ್ನು ಸನ್ಮಾನಿಸಲಾಯಿತು.</p>.<p>ಜಿಕೆವಿಕೆಯ ಕೃಷಿ ವಿಜ್ಞಾನಿ ಸುರೇಶ್, ಪ್ರಭಾರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಹೊನ್ನಸಿದ್ದಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ‘ಕೃಷಿಯಲ್ಲಿ ಮಣ್ಣು ಮತ್ತು ನೀರು ಅತ್ಯಮೂಲ್ಯ. ಈ ಎರಡೂ ಕಲುಷಿತವಾಗದಂತೆ ನಮ್ಮ ರೈತರು ನೋಡಿಕೊಳ್ಳಬೇಕು. ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆಯಡಿ ಸೌಲಭ್ಯ ಸಿಗಲಿದ್ದು, ರೈತರು ಅದನ್ನು ಬಳಸಿಕೊಳ್ಳಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಪಂಕಜಾ ಹೇಳಿದರು.</p>.<p>ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ‘ರೈತ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ಅಭಿವೃದ್ಧಿ ಹೆಸರಲ್ಲಿ ರೈತರ ಫಲವತ್ತಾದ ಕೃಷಿ ಜಮೀನು ಕಬಳಿಸುತ್ತಿದೆ. ರೈತರ ಜಮೀನಿಗೆ ಉತ್ತಮ ಬೆಲೆಯೂ ಸಿಗುತ್ತಿಲ್ಲ. ಜಮೀನು ಕಳೆದುಕೊಳ್ಳುವ ರೈತರ ಹಿತ ಕಾಯುವ ಕೆಲಸವನ್ನು ಸರ್ಕಾರ ಮಾಡಬೇಕು’ ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಆರ್.ಚನ್ನೇಗೌಡ ಒತ್ತಾಯಿಸಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹನುಮಂತರಾಯ ಮಾತನಾಡಿ, ‘ರೈತರು ಸಮಗ್ರ ಕೃಷಿಯನ್ನು ಅಳವಡಿಸಿಕೊಂಡಾಗ ಆರ್ಥಿಕವಾಗಿ ಸದೃಢರಾಗಲು ಸಾಧ್ಯ’ ಎಂದರು.</p>.<p>ಕೃಷಿ, ಮೀನುಗಾರಿಕೆ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಮಳಿಗೆ ತೆರೆದು, ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಿದರು. ಉತ್ತಮ ರೈತರನ್ನು ಸನ್ಮಾನಿಸಲಾಯಿತು.</p>.<p>ಜಿಕೆವಿಕೆಯ ಕೃಷಿ ವಿಜ್ಞಾನಿ ಸುರೇಶ್, ಪ್ರಭಾರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಹೊನ್ನಸಿದ್ದಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>