‘ಸರ್ಕಾರಿ ನೌಕರಿ ಪಡೆಯುವ ಕನಸು ಕಾಣುತ್ತಿದ್ದ ವೆಂಕಟೇಶ್, ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಎಫ್ಡಿಎ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ದೊಡ್ಡಪ್ಪನ ಮಗನೇ ಆಗಿರುವ ರಾಚಪ್ಪ, ಪರೀಕ್ಷೆಗೂ ಕೆಲದಿನಗಳ ಮುನ್ನ ವೆಂಕಟೇಶ್ಗೆ ಕರೆ ಮಾಡಿದ್ದ. ‘ನನಗೆ ಎಫ್ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಿಗಲಿದೆ. ಅದನ್ನು ನಿನಗೆ ಕೊಡುತ್ತೇನೆ. ಅಭ್ಯರ್ಥಿಗಳನ್ನು ಒಟ್ಟುಗೂಡಿಸಿ, ಪ್ರತಿಯೊಬ್ಬರಿಂದ ತಲಾ ₹10 ಲಕ್ಷದಿಂದ ₹ 20 ಲಕ್ಷ ಸಂಗ್ರಹಿಸು’ ಎಂದು ಹೇಳಿದ್ದ.’