<p><strong>ಬೆಂಗಳೂರು:</strong> ‘ಸಮಗ್ರ ಅಭಿವೃದ್ಧಿಯನ್ನು ಒಳಗೊಂಡ ನೂತನ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಇದರಲ್ಲಿಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್ಎಂಇ)ವಿಶೇಷ ಆದ್ಯತೆ ನೀಡಲಾಗುವುದು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಟಿ.ಎಂ. ವಿಜಯಭಾಸ್ಕರ್ ಭರವಸೆ ನೀಡಿದರು.</p>.<p>ಅಸೋಚಾಮ್ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಎಂಎಸ್ಎಂಇ ಕ್ಷೇತ್ರದಲ್ಲಿ ರಫ್ತಿಗೆ ಉತ್ತೇಜನ‘ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಸದ್ಯ ಜಾರಿಯಲ್ಲಿರುವ 2014-19ರ ಕೈಗಾರಿಕೆ ನೀತಿಯ ಅವಧಿ ಸೆಪ್ಟೆಂಬರ್ಗೆ ಕೊನೆಗೊಳ್ಳಲಿದೆ. ನೂತನ ನೀತಿಯಲ್ಲಿ ಉದ್ಯೋಗಾವಕಾಶ ಸೃಷ್ಟಿ ಹಾಗೂ ಕೌಶಲ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಈ ನೀತಿಯು ಎಂಎಸ್ಎಂಇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಾಯವಾಗಲಿದೆ’ ಎಂದರು.</p>.<p>‘ಡಿಸೈನ್ ಸ್ಟುಡಿಯೊ ಆರಂಭಿಸುವ ಬಗ್ಗೆ ಮುಂದಿನ ಬಜೆಟ್ನಲ್ಲಿ ಪ್ರಸ್ತಾಪಿಸಲಾಗುವುದು.ರಾಜ್ಯದಲ್ಲಿ ನೆರೆ ಹಾವಳಿಯಿಂದ 8 ಲಕ್ಷ ಮಂದಿ ಸಂತ್ರಸ್ತರಾಗಿದ್ದು, 2 ಲಕ್ಷ ಮನೆಗಳಿಗೆ ಹಾನಿಯಾಗಿದೆ’ ಎಂದರು.</p>.<p>ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ, ‘ಎಂಎಸ್ಎಂಇ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿದೆ.ಆರ್ಥಿಕತೆಗೆ ಕೂಡಾ ಉತ್ತಮ ಕೊಡುಗೆ ನೀಡಲಾಗುತ್ತಿದೆ. ಅಗ್ಗದ ದರದಲ್ಲಿಬ್ಯಾಂಕ್ಗಳಿಂದ ಸಾಲ ಸಿಗುವಂತಾಗಬೇಕು. ಅದೇ ರೀತಿ, ಜಿಎಸ್ಟಿ ದರದಲ್ಲಿ ರಿಯಾಯಿತಿ ನೀಡಬೇಕು. ಈ ವಿಚಾರವನ್ನು ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತರಲಾಗಿದೆ’ ಎಂದರು.</p>.<p>*<br />ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ಕೈಗಾರಿಕೆಗಳು ನೆರವನ್ನು ನೀಡಿ ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು.<br /><em><strong>-ಟಿ.ಎಂ. ವಿಜಯಭಾಸ್ಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮಗ್ರ ಅಭಿವೃದ್ಧಿಯನ್ನು ಒಳಗೊಂಡ ನೂತನ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಇದರಲ್ಲಿಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್ಎಂಇ)ವಿಶೇಷ ಆದ್ಯತೆ ನೀಡಲಾಗುವುದು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಟಿ.ಎಂ. ವಿಜಯಭಾಸ್ಕರ್ ಭರವಸೆ ನೀಡಿದರು.</p>.<p>ಅಸೋಚಾಮ್ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಎಂಎಸ್ಎಂಇ ಕ್ಷೇತ್ರದಲ್ಲಿ ರಫ್ತಿಗೆ ಉತ್ತೇಜನ‘ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಸದ್ಯ ಜಾರಿಯಲ್ಲಿರುವ 2014-19ರ ಕೈಗಾರಿಕೆ ನೀತಿಯ ಅವಧಿ ಸೆಪ್ಟೆಂಬರ್ಗೆ ಕೊನೆಗೊಳ್ಳಲಿದೆ. ನೂತನ ನೀತಿಯಲ್ಲಿ ಉದ್ಯೋಗಾವಕಾಶ ಸೃಷ್ಟಿ ಹಾಗೂ ಕೌಶಲ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಈ ನೀತಿಯು ಎಂಎಸ್ಎಂಇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಾಯವಾಗಲಿದೆ’ ಎಂದರು.</p>.<p>‘ಡಿಸೈನ್ ಸ್ಟುಡಿಯೊ ಆರಂಭಿಸುವ ಬಗ್ಗೆ ಮುಂದಿನ ಬಜೆಟ್ನಲ್ಲಿ ಪ್ರಸ್ತಾಪಿಸಲಾಗುವುದು.ರಾಜ್ಯದಲ್ಲಿ ನೆರೆ ಹಾವಳಿಯಿಂದ 8 ಲಕ್ಷ ಮಂದಿ ಸಂತ್ರಸ್ತರಾಗಿದ್ದು, 2 ಲಕ್ಷ ಮನೆಗಳಿಗೆ ಹಾನಿಯಾಗಿದೆ’ ಎಂದರು.</p>.<p>ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ, ‘ಎಂಎಸ್ಎಂಇ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿದೆ.ಆರ್ಥಿಕತೆಗೆ ಕೂಡಾ ಉತ್ತಮ ಕೊಡುಗೆ ನೀಡಲಾಗುತ್ತಿದೆ. ಅಗ್ಗದ ದರದಲ್ಲಿಬ್ಯಾಂಕ್ಗಳಿಂದ ಸಾಲ ಸಿಗುವಂತಾಗಬೇಕು. ಅದೇ ರೀತಿ, ಜಿಎಸ್ಟಿ ದರದಲ್ಲಿ ರಿಯಾಯಿತಿ ನೀಡಬೇಕು. ಈ ವಿಚಾರವನ್ನು ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತರಲಾಗಿದೆ’ ಎಂದರು.</p>.<p>*<br />ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ಕೈಗಾರಿಕೆಗಳು ನೆರವನ್ನು ನೀಡಿ ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು.<br /><em><strong>-ಟಿ.ಎಂ. ವಿಜಯಭಾಸ್ಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>