ಬಸ್ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ಉದಯಪುರ ಸಮೀಪದ ಕೃಷಿ ಕಾಲೇಜು ಬಳಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಫಾತಿಮಾ (21) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸಮೀಪದಲ್ಲಿ ಯಾವುದೇ ಆಸ್ಪತ್ರೆಯಿಲ್ಲದ ಕಾರಣ ಮಾರ್ಗ ಮಧ್ಯದಲ್ಲಿಯೇ ಬಸ್ ನಿಲ್ಲಿಸಿ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಜೀವ ಕಾಪಾಡಲಾಗಿತ್ತು.