‘ಕೊರೊನಾ ನೆಪವೊಡ್ಡಿ ಫೆಲೊಶಿಪ್ ಮೊತ್ತ ಕಡಿತಗೊಳಿಸಿರುವುದು ಸರಿಯಲ್ಲ. ಮುಸ್ಲಿಮರ ಸ್ಥಿತಿ–ಗತಿ ಕುರಿತು ವರದಿ ನೀಡಿರುವ ನ್ಯಾಯಮೂರ್ತಿ ರಾಜೇಂದರ್ ಸಾಚಾರ್ ನೇತೃತ್ವದ ಆಯೋಗವು, ಮುಸ್ಲಿಮರನ್ನು ಶೈಕ್ಷಣಿಕವಾಗಿ ಮೇಲಕ್ಕೆತ್ತಬೇಕು ಎಂದು ಹೇಳಿದ್ದರು. ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮರ ಏಳಿಗೆಗೆ ಕ್ರಮ ಕೈಗೊಳ್ಳಬೇಕಾದುದು ಆಯಾ ಸರ್ಕಾರಗಳ ಜವಾಬ್ದಾರಿ’ ಎಂದು ಪಿಎಫ್ಐನ ರಾಜ್ಯ ಉಪಾಧ್ಯಕ್ಷ ಅಯ್ಯೂಬ್ ಕೆ. ಅಗ್ನಾಡಿ ಹೇಳಿದ್ದಾರೆ.