<p><strong>ಬೆಂಗಳೂರು</strong>: ಮಾರತ್ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ್ ಲೇಔಟ್ನಲ್ಲಿ ನೆಲಸಿದ್ದ ವ್ಯಕ್ತಿಯೊಬ್ಬರು, 26 ಪುಟಗಳ ಮರಣ ಪತ್ರವನ್ನು ಬರೆದಿಟ್ಟು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಉತ್ತರ ಪ್ರದೇಶದ ಅತುಲ್ ಸುಭಾಷ್(34) ಆತ್ಮಹತ್ಯೆ ಮಾಡಿಕೊಂಡವರು. ಕಂಪನಿಯೊಂದರಲ್ಲಿ ನಿರ್ದೇಶಕರಾಗಿ ಅವರು ಕೆಲಸ ಮಾಡುತ್ತಿದ್ದರು. </p>.<p>ಮರಣ ಪತ್ರವನ್ನೂ ಇ–ಮೇಲ್ ಮೂಲಕ ಸುಪ್ರೀಂ ಕೋರ್ಟ್, ಹೈಕೋರ್ಟ್, ತಮ್ಮ ಕಚೇರಿ, ಸರ್ಕಾರೇತರ ಸಂಸ್ಥೆ, ಕುಟುಂಬ ಸದಸ್ಯರಿಗೆ ಕಳುಹಿಸಿ ಭಾನುವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಅತುಲ್ ಸುಭಾಷ್ ಪತ್ನಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಅತುಲ್ ಅವರು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆರಂಭದಲ್ಲಿ ಉತ್ತರ ಪ್ರದೇಶದಲ್ಲೇ ದಂಪತಿ ನೆಲಸಿದ್ದರು. ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಇಬ್ಬರೂ ಬಂದಿದ್ದರು. ಮಂಜುನಾಥ್ ಲೇಔಟ್ನ ಅಪಾರ್ಟ್ಮೆಂಟ್ನ ಫ್ಲ್ಯಾಟ್ವೊಂದರಲ್ಲಿ ವಾಸವಾಗಿದ್ದರು. ಈ ಮಧ್ಯೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು, ಪತ್ನಿ ಉತ್ತರ ಪ್ರದೇಶಕ್ಕೆ ವಾಪಸ್ ತೆರಳಿದ್ದರು ಎಂದು ಮೂಲಗಳು ಹೇಳಿವೆ.</p>.<p>‘ಎನ್ಜಿಒ ಸೇರಿದಂತೆ ವಿವಿಧ ವಿಳಾಸಕ್ಕೆ ಮರಣ ಪತ್ರವನ್ನು ಇ–ಮೇಲ್ ಮಾಡಿ, ಸಾಧ್ಯವಾದರೆ ನನ್ನ ಕುಟುಂಬಕ್ಕೆ ಸಹಾಯ ಮಾಡುವಂತೆಯೂ ಅದರಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>‘ನ್ಯಾಯ ಸಿಗುವುದು ಬಾಕಿಯಿದೆ ಎಂಬ ಪೋಸ್ಟರ್ ಅನ್ನು ಎದೆಯ ಮೇಲೆ ಅಂಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣಪತ್ರದಲ್ಲಿ ದಿನಚರಿಯನ್ನು ದಾಖಲಿಸಿದ್ದಾರೆ. ಕುಟುಂಬಸ್ಥರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಉತ್ತರ ಪ್ರದೇಶದ ಪೊಲೀಸ್ ಠಾಣೆಯೊಂದರಲ್ಲಿ ಅತುಲ್ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ, ಹಲ್ಲೆಯ ದೂರು ದಾಖಲಿಸಿದ್ದರು. ವಿಚ್ಛೇಧನಕ್ಕೂ ಅರ್ಜಿ ಹಾಕಿ ₹1 ಕೋಟಿ ಪರಿಹಾರಕ್ಕೆ ಕೋರಿದ್ದರು. ಅತುಲ್ ಸಹ ಪ್ರತಿ ದೂರು ದಾಖಲಿಸಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾರತ್ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ್ ಲೇಔಟ್ನಲ್ಲಿ ನೆಲಸಿದ್ದ ವ್ಯಕ್ತಿಯೊಬ್ಬರು, 26 ಪುಟಗಳ ಮರಣ ಪತ್ರವನ್ನು ಬರೆದಿಟ್ಟು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಉತ್ತರ ಪ್ರದೇಶದ ಅತುಲ್ ಸುಭಾಷ್(34) ಆತ್ಮಹತ್ಯೆ ಮಾಡಿಕೊಂಡವರು. ಕಂಪನಿಯೊಂದರಲ್ಲಿ ನಿರ್ದೇಶಕರಾಗಿ ಅವರು ಕೆಲಸ ಮಾಡುತ್ತಿದ್ದರು. </p>.<p>ಮರಣ ಪತ್ರವನ್ನೂ ಇ–ಮೇಲ್ ಮೂಲಕ ಸುಪ್ರೀಂ ಕೋರ್ಟ್, ಹೈಕೋರ್ಟ್, ತಮ್ಮ ಕಚೇರಿ, ಸರ್ಕಾರೇತರ ಸಂಸ್ಥೆ, ಕುಟುಂಬ ಸದಸ್ಯರಿಗೆ ಕಳುಹಿಸಿ ಭಾನುವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಅತುಲ್ ಸುಭಾಷ್ ಪತ್ನಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಅತುಲ್ ಅವರು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆರಂಭದಲ್ಲಿ ಉತ್ತರ ಪ್ರದೇಶದಲ್ಲೇ ದಂಪತಿ ನೆಲಸಿದ್ದರು. ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಇಬ್ಬರೂ ಬಂದಿದ್ದರು. ಮಂಜುನಾಥ್ ಲೇಔಟ್ನ ಅಪಾರ್ಟ್ಮೆಂಟ್ನ ಫ್ಲ್ಯಾಟ್ವೊಂದರಲ್ಲಿ ವಾಸವಾಗಿದ್ದರು. ಈ ಮಧ್ಯೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು, ಪತ್ನಿ ಉತ್ತರ ಪ್ರದೇಶಕ್ಕೆ ವಾಪಸ್ ತೆರಳಿದ್ದರು ಎಂದು ಮೂಲಗಳು ಹೇಳಿವೆ.</p>.<p>‘ಎನ್ಜಿಒ ಸೇರಿದಂತೆ ವಿವಿಧ ವಿಳಾಸಕ್ಕೆ ಮರಣ ಪತ್ರವನ್ನು ಇ–ಮೇಲ್ ಮಾಡಿ, ಸಾಧ್ಯವಾದರೆ ನನ್ನ ಕುಟುಂಬಕ್ಕೆ ಸಹಾಯ ಮಾಡುವಂತೆಯೂ ಅದರಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>‘ನ್ಯಾಯ ಸಿಗುವುದು ಬಾಕಿಯಿದೆ ಎಂಬ ಪೋಸ್ಟರ್ ಅನ್ನು ಎದೆಯ ಮೇಲೆ ಅಂಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣಪತ್ರದಲ್ಲಿ ದಿನಚರಿಯನ್ನು ದಾಖಲಿಸಿದ್ದಾರೆ. ಕುಟುಂಬಸ್ಥರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಉತ್ತರ ಪ್ರದೇಶದ ಪೊಲೀಸ್ ಠಾಣೆಯೊಂದರಲ್ಲಿ ಅತುಲ್ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ, ಹಲ್ಲೆಯ ದೂರು ದಾಖಲಿಸಿದ್ದರು. ವಿಚ್ಛೇಧನಕ್ಕೂ ಅರ್ಜಿ ಹಾಕಿ ₹1 ಕೋಟಿ ಪರಿಹಾರಕ್ಕೆ ಕೋರಿದ್ದರು. ಅತುಲ್ ಸಹ ಪ್ರತಿ ದೂರು ದಾಖಲಿಸಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>