<p><strong>ಬೆಂಗಳೂರು</strong>: ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದೆ ವ್ಯಾಪಕವಾಗಿ ಹರಡಿದರೆ ಸೋಂಕಿತರ ಚಿಕಿತ್ಸೆಗೆ ತಾತ್ಕಾಲಿಕ ಬಯಲು ಆಸ್ಪತ್ರೆಗಳನ್ನು ತೆರೆಯಲು ನಗರದ ಅಲ್ಲಲ್ಲಿ ಜಾಗ ಗುರುತಿಸಲಾಗಿದೆ’ ಎಂದು ಬಿಬಿಎಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ತಿಳಿಸಿದರು.</p>.<p>ಬಿಬಿಎಂಪಿ ಕೌನ್ಸಿಲ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಂಠೀರವ ಕ್ರೀಡಾಂಗಣ, ಅರಮನೆ ಮೈದಾನದಲ್ಲಿನ ತ್ರಿಪುರವಾಸಿನಿ ಕಲ್ಯಾಣ ಮಂಟಪ, ಬಿಐಸಿ(ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್), ವೈಟ್ಫೀಲ್ಡ್ನಲ್ಲಿರುವ ವಸ್ತುಪ್ರದರ್ಶನ ಕೇಂದ್ರ ಹಾಗೂ ವಿವಿಧೆಡೆ ಇರುವ ಕ್ರೀಡಾಂಗಣಗಳನ್ನು ಗುರುತಿಸಲಾಗಿದೆ’ ಎಂದು ಹೇಳಿದರು.</p>.<p>‘ಸಂದರ್ಭ ಬಂದರೆ ರಿವರ್ಸ್ ಕ್ವಾರಂಟೈನ್ (60 ವರ್ಷ ಮೇಲ್ಪಟ್ಟವರು, ಹೃದಯ ತೊಂದರೆ, ಉಸಿರಾಟದ ತೊಂದರೆ ಇರುವವರು, ಗರ್ಭಿಣಿಯರನ್ನು ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ಇರಿಸುವುದು. ಕುಟುಂಬದ ಇತರ ಸದಸ್ಯರಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು)ಅನಿವಾರ್ಯವಾಗಲಿದೆ’ ಎಂದು ತಿಳಿಸಿದರು.</p>.<p>‘ಕೋವಿಡ್–19 ಸೊಂಕಿತರ ಸಂಖ್ಯೆ ಹೆಚ್ಚಿರುವದೇಶಗಳಲ್ಲಿ ಸೋಂಕು ದೃಢಪಟ್ಟ ವ್ಯಕ್ತಿ ಆರೋಗ್ಯಕರವಾಗಿದ್ದರೆ ಆಸ್ಪತ್ರೆಗೆ ಕರೆದೊಯ್ಯುತ್ತಿಲ್ಲ. ಮನೆಯಲ್ಲೇ ಪ್ರತ್ಯೇಕವಾಗಿ ಇರಲು ಸೂಚಿಸಲಾಗುತ್ತಿದೆ. ಪರಿಸ್ಥಿತಿ ಕೈ ಮೀರಿದಾಗ ಆ ರೀತಿಯ ಕ್ರಮಗಳನ್ನು ಬೆಂಗಳೂರಿನಲ್ಲೂ ಕೈಗೊಳ್ಳಲಾಗುತ್ತದೆ. ಆ ಮಟ್ಟಕ್ಕೆ ಹೋಗದಂತೆ ತಡೆಯುವುದು ಜನರ ಕೈನಲ್ಲೇ ಇದೆ. ಹೊರ ರಾಜ್ಯಗಳಿಂದ ಬಂದವರು ಮತ್ತು ಪ್ರವಾಸ ಇತಿಹಾಸ ಹೊಂದಿದವರು 14 ದಿನ ಪ್ರತ್ಯೇಕವಾಗಿಯೇ ಇರುವುದು ಒಳ್ಳೆಯದು’ ಎಂದರು.</p>.<p>‘ಪ್ರಸ್ತುತ ನಗರದಲ್ಲಿ ಸೋಂಕು ನಿಯಂತ್ರಣದಲ್ಲಿದೆ. ಹೊರ ರಾಜ್ಯಗಳಿಂದ ಬಂದವರು, ಪ್ರಯಾಣ ಇತಿಹಾಸ ಹೊಂದಿದವರಲ್ಲಿ ಮಾತ್ರ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಜನ ಭಯಪಡುವ ಅಗತ್ಯ ಇಲ್ಲ. ಮುನ್ನೆಚ್ಚರಿಕೆ ವಹಿಸಿದರೆ ಸಾಕು’ ಎಂದರು.</p>.<p>‘ಕಂಟೈನ್ಮೆಂಟ್ ವಲಯದ ಮಾರ್ಗಸೂಚಿ ಬದಲಾಗಿದೆ. ಸೋಂಕು ಪತ್ತೆಯಾದ ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡುವುದಿಲ್ಲ. ಮನೆ ಅಥವಾ ಹೆಚ್ಚೆಂದರೆ ಆ ಬೀದಿಯನ್ನುಮಾತ್ರ ಕಂಟೈನ್ಮೆಂಟ್ ವಲಯ ಎಂದು ಪರಿಗಣಿಸಲಾಗುತ್ತಿದೆ.ಹೀಗಾಗಿ, ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆ ಜಾಸ್ತಿಯಾಗಿವೆ. ಈ ಸಂಖ್ಯೆ ನೋಡಿಕೊಂಡು ಜನ ಆತಂಕಪಡುವುದು ಬೇಡ.ಸೋಂಕು ಸಮುದಾಯಕ್ಕೆ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ’ ಎಂದು ವಿವರಿಸಿದರು.</p>.<p class="Briefhead"><strong>ನಿತ್ಯ 2 ಸಾವಿರ ಜನರಿಗೆ ಪರೀಕ್ಷೆ</strong><br />‘ಬೆಂಗಳೂರಿನಲ್ಲಿ ಪ್ರತಿನಿತ್ಯ 2 ಸಾವಿರ ಜನರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ಅನಿಲ್ಕುಮಾರ್ ಹೇಳಿದರು.</p>.<p>‘ಹೊರ ಜಿಲ್ಲೆಗಳಿಂದ ಗಂಟಲು ದ್ರವದ ಮಾದರಿಗಳು ಹೆಚ್ಚಾಗಿ ಬಂದರೆ ಬೆಂಗಳೂರಿನಲ್ಲಿ ಪರೀಕ್ಷೆಗೆ ಕಳುಹಿಸಿದ್ದವರ ವರದಿ ಬರುವುದು ಎರಡು–ಮೂರು ದಿನ ತಡವಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಪರೀಕ್ಷಾ ವರದಿ ಬರುವಷ್ಟರಲ್ಲೇ ಸೋಂಕಿತರು ಬೇರೆಯವರಿಗೆ ಹರಡುವ ಸಾಧ್ಯತೆ ಇದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪ್ರಕರಣ ಪತ್ತೆಯಾದ ಕೂಡಲೇ ಸೋಂಕಿತರ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ. ಸೋಂಕಿತರು ಬಿಬಿಎಂಪಿಗೆ ತಿಳಿಸಿದರೆ ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದೆ ವ್ಯಾಪಕವಾಗಿ ಹರಡಿದರೆ ಸೋಂಕಿತರ ಚಿಕಿತ್ಸೆಗೆ ತಾತ್ಕಾಲಿಕ ಬಯಲು ಆಸ್ಪತ್ರೆಗಳನ್ನು ತೆರೆಯಲು ನಗರದ ಅಲ್ಲಲ್ಲಿ ಜಾಗ ಗುರುತಿಸಲಾಗಿದೆ’ ಎಂದು ಬಿಬಿಎಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ತಿಳಿಸಿದರು.</p>.<p>ಬಿಬಿಎಂಪಿ ಕೌನ್ಸಿಲ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಂಠೀರವ ಕ್ರೀಡಾಂಗಣ, ಅರಮನೆ ಮೈದಾನದಲ್ಲಿನ ತ್ರಿಪುರವಾಸಿನಿ ಕಲ್ಯಾಣ ಮಂಟಪ, ಬಿಐಸಿ(ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್), ವೈಟ್ಫೀಲ್ಡ್ನಲ್ಲಿರುವ ವಸ್ತುಪ್ರದರ್ಶನ ಕೇಂದ್ರ ಹಾಗೂ ವಿವಿಧೆಡೆ ಇರುವ ಕ್ರೀಡಾಂಗಣಗಳನ್ನು ಗುರುತಿಸಲಾಗಿದೆ’ ಎಂದು ಹೇಳಿದರು.</p>.<p>‘ಸಂದರ್ಭ ಬಂದರೆ ರಿವರ್ಸ್ ಕ್ವಾರಂಟೈನ್ (60 ವರ್ಷ ಮೇಲ್ಪಟ್ಟವರು, ಹೃದಯ ತೊಂದರೆ, ಉಸಿರಾಟದ ತೊಂದರೆ ಇರುವವರು, ಗರ್ಭಿಣಿಯರನ್ನು ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ಇರಿಸುವುದು. ಕುಟುಂಬದ ಇತರ ಸದಸ್ಯರಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು)ಅನಿವಾರ್ಯವಾಗಲಿದೆ’ ಎಂದು ತಿಳಿಸಿದರು.</p>.<p>‘ಕೋವಿಡ್–19 ಸೊಂಕಿತರ ಸಂಖ್ಯೆ ಹೆಚ್ಚಿರುವದೇಶಗಳಲ್ಲಿ ಸೋಂಕು ದೃಢಪಟ್ಟ ವ್ಯಕ್ತಿ ಆರೋಗ್ಯಕರವಾಗಿದ್ದರೆ ಆಸ್ಪತ್ರೆಗೆ ಕರೆದೊಯ್ಯುತ್ತಿಲ್ಲ. ಮನೆಯಲ್ಲೇ ಪ್ರತ್ಯೇಕವಾಗಿ ಇರಲು ಸೂಚಿಸಲಾಗುತ್ತಿದೆ. ಪರಿಸ್ಥಿತಿ ಕೈ ಮೀರಿದಾಗ ಆ ರೀತಿಯ ಕ್ರಮಗಳನ್ನು ಬೆಂಗಳೂರಿನಲ್ಲೂ ಕೈಗೊಳ್ಳಲಾಗುತ್ತದೆ. ಆ ಮಟ್ಟಕ್ಕೆ ಹೋಗದಂತೆ ತಡೆಯುವುದು ಜನರ ಕೈನಲ್ಲೇ ಇದೆ. ಹೊರ ರಾಜ್ಯಗಳಿಂದ ಬಂದವರು ಮತ್ತು ಪ್ರವಾಸ ಇತಿಹಾಸ ಹೊಂದಿದವರು 14 ದಿನ ಪ್ರತ್ಯೇಕವಾಗಿಯೇ ಇರುವುದು ಒಳ್ಳೆಯದು’ ಎಂದರು.</p>.<p>‘ಪ್ರಸ್ತುತ ನಗರದಲ್ಲಿ ಸೋಂಕು ನಿಯಂತ್ರಣದಲ್ಲಿದೆ. ಹೊರ ರಾಜ್ಯಗಳಿಂದ ಬಂದವರು, ಪ್ರಯಾಣ ಇತಿಹಾಸ ಹೊಂದಿದವರಲ್ಲಿ ಮಾತ್ರ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಜನ ಭಯಪಡುವ ಅಗತ್ಯ ಇಲ್ಲ. ಮುನ್ನೆಚ್ಚರಿಕೆ ವಹಿಸಿದರೆ ಸಾಕು’ ಎಂದರು.</p>.<p>‘ಕಂಟೈನ್ಮೆಂಟ್ ವಲಯದ ಮಾರ್ಗಸೂಚಿ ಬದಲಾಗಿದೆ. ಸೋಂಕು ಪತ್ತೆಯಾದ ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡುವುದಿಲ್ಲ. ಮನೆ ಅಥವಾ ಹೆಚ್ಚೆಂದರೆ ಆ ಬೀದಿಯನ್ನುಮಾತ್ರ ಕಂಟೈನ್ಮೆಂಟ್ ವಲಯ ಎಂದು ಪರಿಗಣಿಸಲಾಗುತ್ತಿದೆ.ಹೀಗಾಗಿ, ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆ ಜಾಸ್ತಿಯಾಗಿವೆ. ಈ ಸಂಖ್ಯೆ ನೋಡಿಕೊಂಡು ಜನ ಆತಂಕಪಡುವುದು ಬೇಡ.ಸೋಂಕು ಸಮುದಾಯಕ್ಕೆ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ’ ಎಂದು ವಿವರಿಸಿದರು.</p>.<p class="Briefhead"><strong>ನಿತ್ಯ 2 ಸಾವಿರ ಜನರಿಗೆ ಪರೀಕ್ಷೆ</strong><br />‘ಬೆಂಗಳೂರಿನಲ್ಲಿ ಪ್ರತಿನಿತ್ಯ 2 ಸಾವಿರ ಜನರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ಅನಿಲ್ಕುಮಾರ್ ಹೇಳಿದರು.</p>.<p>‘ಹೊರ ಜಿಲ್ಲೆಗಳಿಂದ ಗಂಟಲು ದ್ರವದ ಮಾದರಿಗಳು ಹೆಚ್ಚಾಗಿ ಬಂದರೆ ಬೆಂಗಳೂರಿನಲ್ಲಿ ಪರೀಕ್ಷೆಗೆ ಕಳುಹಿಸಿದ್ದವರ ವರದಿ ಬರುವುದು ಎರಡು–ಮೂರು ದಿನ ತಡವಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಪರೀಕ್ಷಾ ವರದಿ ಬರುವಷ್ಟರಲ್ಲೇ ಸೋಂಕಿತರು ಬೇರೆಯವರಿಗೆ ಹರಡುವ ಸಾಧ್ಯತೆ ಇದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪ್ರಕರಣ ಪತ್ತೆಯಾದ ಕೂಡಲೇ ಸೋಂಕಿತರ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ. ಸೋಂಕಿತರು ಬಿಬಿಎಂಪಿಗೆ ತಿಳಿಸಿದರೆ ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>