ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸಕ್ಕಿದ್ದ ಆಭರಣ ಮಳಿಗೆಯಲ್ಲಿ ₹ 58.60 ಲಕ್ಷ ಮೌಲ್ಯದ ಆಭರಣ ಕಳವು: ಯುವತಿ ಸೆರೆ

Last Updated 7 ಜನವರಿ 2023, 21:06 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸಕ್ಕಿದ್ದ ಆಭರಣ ಮಳಿಗೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಆರ್‌. ವಾಣಿ ವಾಡೇಕರ್ (22) ಎಂಬುವವರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

‘ಬೀದರ್‌ನ ವಾಣಿ, ಕೆಲಸ ಹುಡುಕಿಕೊಂಡು ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಯಲಹಂಕದ ಆರ್.ಎಂ.ಜೆಡ್ ಗ್ಯಾಲೆರಿಯಾ ಮಾಲ್‌ನಲ್ಲಿರುವ ತನಿಷ್ಕ ಜ್ಯುವೆಲರಿ ಮಳಿಗೆಯಲ್ಲಿ ಮಾರುಕಟ್ಟೆ ಪ್ರತಿನಿಧಿಯಾಗಿ ಕೆಲಸಕ್ಕೆ ಸೇರಿದ್ದರು’ ಎಂದು ಪೊಲೀಸರು ಹೇಳಿದರು.

‘ಕೆಲಸ ಮಾಡುತ್ತಲೇ ಆರೋಪಿ, ಆಗಾಗ ಚಿನ್ನಾಭರಣ ಕದಿಯುತ್ತಿದ್ದರು. ಇತ್ತೀಚೆಗೆ ಅವರ ಕೃತ್ಯದ ಬಗ್ಗೆ ಮಳಿಗೆ ವ್ಯವಸ್ಥಾಪಕರಿಗೆ ಅನುಮಾನ ಬಂದಿತ್ತು. ಅವರು ನೀಡಿದ್ದ ದೂರು ಆಧರಿಸಿ ಆರೋಪಿಯನ್ನು
ಬಂಧಿಸಲಾಗಿದೆ. ₹ 58.60 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಜ್ರದ ಆಭರಣ ಜಪ್ತಿ ಮಾಡಲಾಗಿದೆ’ ಎಂದು
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT