ಕುಪ್ಪರಾಜು, ಮುರುಗ, ಶಕ್ತಿವೇಲು, ಮುರಳಿ ಹಾಗೂ ಸುಂದರ್ ಎಂಬುವರು ಹಲ್ಲೆ ನಡೆಸಿದ್ದಾಗಿ ಕೆನ್ನಿ ದೂರಿನಲ್ಲಿ ಆರೋಪಿಸಿದ್ದಾರೆ. ತಮ್ಮ ಮಗ ನೆರೆಮನೆಯ ಯುವತಿಯನ್ನು ಪ್ರೀತಿಸಿ ಇತ್ತೀಚೆಗೆ ಮದುವೆ ಆಗಿದ್ದರು. ಈ ಮದುವೆ ಹುಡುಗಿ ಮನೆಯವರಿಗೆ ಇಷ್ಟವಿರಲಿಲ್ಲ. ತಾವು ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿಯಲ್ಲಿದ್ದಾಗ ಆರೋಪಿಗಳು ದಾಳಿ ಮಾಡಿ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ವಿವರಿಸಿದ್ದಾರೆ.