<p><strong>ಬೆಂಗಳೂರು</strong>: ‘ಕೋಗಿಲು ಲೇಔಟ್ ಸಂತ್ರಸ್ತರಿಗೆ ಕೂಡಲೇ ಶಾಶ್ವತ ವಸತಿ ಕಲ್ಪಿಸಬೇಕು ಹಾಗೂ ಪುನರ್ವಸತಿ ಅವಧಿಯಲ್ಲಿ ಆರೋಗ್ಯ, ಆಹಾರ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಬೇಕು. ಸೂಕ್ತ ಪುನರ್ವಸತಿ ಕಲ್ಪಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಎಸ್ಐಓ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯಾನ್ ಹೇಳಿದರು.</p>.<p>ಕೋಗಿಲು ಬಡಾವಣೆ ಕೊಳೆಗೇರಿ ನಿವಾಸಿಗಳ ಹೋರಾಟ ಸಮಿತಿ ತೆರವು ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಸಂತ್ರಸ್ತರಿಗೆ ಯಾವುದೇ ನೋಟಿಸ್ ಅಥವಾ ಮುನ್ಸೂಚನೆ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದು ಅತ್ಯಂತ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪ್ರಜಾಪ್ರಭುತ್ವವು ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ಅಸ್ತಿತ್ವದಲ್ಲಿದೆ ಎಂಬುದು ಸರ್ಕಾರಕ್ಕೆ ನೆನಪಿರಬೇಕು. ಪ್ರಜೆಗಳ ಕಲ್ಯಾಣಕ್ಕೆ ಸದಾ ಆದ್ಯತೆ ನೀಡಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರತಿಭಟನೆಯಲ್ಲಿ ಎಸ್ಐಓ ಸದಸ್ಯರಾದ ವಸೀಮ್ ಮತ್ತು ನದೀಮ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋಗಿಲು ಲೇಔಟ್ ಸಂತ್ರಸ್ತರಿಗೆ ಕೂಡಲೇ ಶಾಶ್ವತ ವಸತಿ ಕಲ್ಪಿಸಬೇಕು ಹಾಗೂ ಪುನರ್ವಸತಿ ಅವಧಿಯಲ್ಲಿ ಆರೋಗ್ಯ, ಆಹಾರ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಬೇಕು. ಸೂಕ್ತ ಪುನರ್ವಸತಿ ಕಲ್ಪಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಎಸ್ಐಓ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯಾನ್ ಹೇಳಿದರು.</p>.<p>ಕೋಗಿಲು ಬಡಾವಣೆ ಕೊಳೆಗೇರಿ ನಿವಾಸಿಗಳ ಹೋರಾಟ ಸಮಿತಿ ತೆರವು ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಸಂತ್ರಸ್ತರಿಗೆ ಯಾವುದೇ ನೋಟಿಸ್ ಅಥವಾ ಮುನ್ಸೂಚನೆ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದು ಅತ್ಯಂತ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪ್ರಜಾಪ್ರಭುತ್ವವು ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ಅಸ್ತಿತ್ವದಲ್ಲಿದೆ ಎಂಬುದು ಸರ್ಕಾರಕ್ಕೆ ನೆನಪಿರಬೇಕು. ಪ್ರಜೆಗಳ ಕಲ್ಯಾಣಕ್ಕೆ ಸದಾ ಆದ್ಯತೆ ನೀಡಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರತಿಭಟನೆಯಲ್ಲಿ ಎಸ್ಐಓ ಸದಸ್ಯರಾದ ವಸೀಮ್ ಮತ್ತು ನದೀಮ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>