<p><strong>ಬೆಂಗಳೂರು: </strong>‘ಹಿಂದೂ’ ಪದದ ಕುರಿತು ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ನಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.</p>.<p>ಈ ಸಂಬಂಧ ಹೈಕೋರ್ಟ್ ವಕೀಲ ಕೆ. ದಿಲೀಪ್ ಕುಮಾರ್ ನಗರದ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬುಧವಾರ ಖಾಸಗಿ ದೂರು ದಾಖಲಿಸಿದ್ದು, ‘ಸತೀಶ್ ಜಾರಕಿಹೊಳಿ ವಿರುದ್ಧ ಗಲಭೆ ಮತ್ತು ಮಾನಹಾನಿ ಪ್ರಕರಣಗಳಡಿ ಸಂಜ್ಞೇಯ ಅಪರಾಧಗಳನ್ನು ಪರಿಗಣಿಸಿ ವಿಚಾರಣೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.</p>.<p><strong>ದೂರಿನಲ್ಲಿ ಏನಿದೆ?:</strong> ‘ ಸತೀಶ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಜನರ ಭಾವನೆಗಳನ್ನು ಅವಮಾನಿಸಿ ಧರ್ಮದ ಗೌರವಕ್ಕೆ ಧಕ್ಕೆ ತರಲಾಗಿದೆ. ಇದು ಭಾರತೀಯ ದಂಡ ಸಂಹಿತೆ–1860ರ ಕಲಂ 500 (ಮಾನಹಾನಿ) ಮತ್ತು 159ರ ಅಡಿಯಲ್ಲಿ (ಗಲಭೆ ಕಾರಣವಾಗುವಂತೆ ಪ್ರಚೋದನೆ ಹೇಳಿಕೆ ನೀಡಿದ) ಅಪರಾಧ ಕೃತ್ಯವಾಗಿದೆ. ಆದ್ದರಿಂದ, ಆರೋಪಿ ವಿರುದ್ಧ ಸಂಜ್ಞೇಯ ಅಪರಾಧ ಕೃತ್ಯಗಳನ್ನು ಪರಿಗಣಿಸಬೇಕು’ ಎಂದು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಹಿಂದೂ’ ಪದದ ಕುರಿತು ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ನಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.</p>.<p>ಈ ಸಂಬಂಧ ಹೈಕೋರ್ಟ್ ವಕೀಲ ಕೆ. ದಿಲೀಪ್ ಕುಮಾರ್ ನಗರದ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬುಧವಾರ ಖಾಸಗಿ ದೂರು ದಾಖಲಿಸಿದ್ದು, ‘ಸತೀಶ್ ಜಾರಕಿಹೊಳಿ ವಿರುದ್ಧ ಗಲಭೆ ಮತ್ತು ಮಾನಹಾನಿ ಪ್ರಕರಣಗಳಡಿ ಸಂಜ್ಞೇಯ ಅಪರಾಧಗಳನ್ನು ಪರಿಗಣಿಸಿ ವಿಚಾರಣೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.</p>.<p><strong>ದೂರಿನಲ್ಲಿ ಏನಿದೆ?:</strong> ‘ ಸತೀಶ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಜನರ ಭಾವನೆಗಳನ್ನು ಅವಮಾನಿಸಿ ಧರ್ಮದ ಗೌರವಕ್ಕೆ ಧಕ್ಕೆ ತರಲಾಗಿದೆ. ಇದು ಭಾರತೀಯ ದಂಡ ಸಂಹಿತೆ–1860ರ ಕಲಂ 500 (ಮಾನಹಾನಿ) ಮತ್ತು 159ರ ಅಡಿಯಲ್ಲಿ (ಗಲಭೆ ಕಾರಣವಾಗುವಂತೆ ಪ್ರಚೋದನೆ ಹೇಳಿಕೆ ನೀಡಿದ) ಅಪರಾಧ ಕೃತ್ಯವಾಗಿದೆ. ಆದ್ದರಿಂದ, ಆರೋಪಿ ವಿರುದ್ಧ ಸಂಜ್ಞೇಯ ಅಪರಾಧ ಕೃತ್ಯಗಳನ್ನು ಪರಿಗಣಿಸಬೇಕು’ ಎಂದು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>